ಕರ್ನಾಟಕ

karnataka

ಮೈಸೂರು ಜಿ.ಪಂ‌. ಮಾಜಿ ಅಧ್ಯಕ್ಷನ ಪುತ್ರ ನೇಣಿಗೆ ಶರಣು

By

Published : Jun 29, 2021, 12:28 PM IST

ಮೈಸೂರು ಜಿಲ್ಲಾ ಪಂಚಾಯತ್​ ಮಾಜಿ ಅಧ್ಯಕ್ಷನ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲಸವಿಲ್ಲದೆ, ಅಲೆದಾಡುತ್ತಿದ್ದ ಮಗನಿಗೆ ಕೆಲಸಕ್ಕೆ ಹೋಗು ಅಂತಾ ಅಪ್ಪ ಬುದ್ಧಿವಾದ ಹೇಳಿದ್ದಕ್ಕೆ ಯುವಕ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ ಎನ್ನಲಾಗ್ತಿದೆ.

suicide
ಆತ್ಮಹತ್ಯೆ

ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯತ್​ ಮಾಜಿ ಅಧ್ಯಕ್ಷರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪ್ಪ ಬುದ್ಧಿ ಹೇಳಿದ್ದಕ್ಕೆ ಮನನೊಂದು ಯುವಕ ಬಾರದಲೋಕಕ್ಕೆ ಪಯಣ ಬೆಳೆಸಿರುವ ಘಟನೆ ಕುವೆಂಪುನಗರದಲ್ಲಿ ನಡೆದಿದೆ. ಕಡಕೋಳ ಪೃಥ್ವಿ ಆತ್ಮಹತ್ಯೆಗೆ ಶರಣಾಗಿರುವ ಯುವಕ.

23 ವರ್ಷ ವಯಸ್ಸಿನ ಪೃಥ್ವಿ ಮಾಜಿ ಜಿಲ್ಲಾ ಪಂಚಾಯತ್​ ಅಧ್ಯಕ್ಷ ಕಡಕೋಳ ನಾಗರಾಜ್ ಅವರ ಪುತ್ರನಾಗಿದ್ದು, ಸೋಮವಾರ ರಾತ್ರಿ ನೇಣಿಗೆ ಶರಣಾಗಿದ್ದಾನೆ.

ಕೆಲಸವಿಲ್ಲದೆ ಅಲೆದಾಡುತ್ತಿದ್ದ ಮಗನಿಗೆ, ಕೆಲಸಕ್ಕೆ ಹೋಗುವಂತೆ ಆಗಾಗ್ಗೆ ತಂದೆ ನಾಗರಾಜ್​ ಬುದ್ದಿ ಹೇಳುತ್ತಿದ್ದರು ಎನ್ನಲಾಗ್ತಿದೆ. ಇದರಿಂದ ಮನನೊಂದ ಈತ ಕುವೆಂಪು ನಗರದಲ್ಲಿರುವ ಎನ್‌.ಬ್ಲಾಕ್ ನಿವಾಸದಲ್ಲಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details