ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪ್ಪ ಬುದ್ಧಿ ಹೇಳಿದ್ದಕ್ಕೆ ಮನನೊಂದು ಯುವಕ ಬಾರದಲೋಕಕ್ಕೆ ಪಯಣ ಬೆಳೆಸಿರುವ ಘಟನೆ ಕುವೆಂಪುನಗರದಲ್ಲಿ ನಡೆದಿದೆ. ಕಡಕೋಳ ಪೃಥ್ವಿ ಆತ್ಮಹತ್ಯೆಗೆ ಶರಣಾಗಿರುವ ಯುವಕ.
23 ವರ್ಷ ವಯಸ್ಸಿನ ಪೃಥ್ವಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಡಕೋಳ ನಾಗರಾಜ್ ಅವರ ಪುತ್ರನಾಗಿದ್ದು, ಸೋಮವಾರ ರಾತ್ರಿ ನೇಣಿಗೆ ಶರಣಾಗಿದ್ದಾನೆ.