ಕರ್ನಾಟಕ

karnataka

ETV Bharat / crime

ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ಪುಂಡಾಟ ಆರೋಪ; 'ಬುಲ್ಲಿ ಬಾಯಿ' ಆ್ಯಪ್‌ಗೆ ನಿರ್ಬಂಧ - ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಮಹಿಳೆ ವಿರುದ್ಧ ಅವಹೇಳಕಾರಿ ಪೋಸ್ಟ್‌ ಆರೋಪ

ಮೊಬೈಲ್‌ ಆ್ಯಪ್‌ ಮೂಲಕ ಅಪರಿಚಿತ ವ್ಯಕ್ತಿಗಳ ಗುಂಪೊಂದು ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಮಹಿಳಾ ಪತ್ರಕರ್ತೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು 'ಬುಲ್ಲಿ ಬಾಯಿ' ಆ್ಯಪ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಕೇಂದ್ರದ ಐಟಿ ಸಚಿವ ಅಶ್ವಿನಿ ವೈಷ್ಟವ್‌ ತಿಳಿಸಿದ್ದಾರೆ. ಇದಕ್ಕೆ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಧನ್ಯವಾದ ತಿಳಿಸಿದರು.

Bulli Bai' app targeting Muslim women blocked, says Union Minister for IT
ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪುಂಡಾಟ ಆರೋಪ; 'ಬುಲ್ಲಿ ಬಾಯಿ' ಆ್ಯಪ್‌ಗೆ ನಿರ್ಬಂಧ - ಐಟಿ ಸಚಿವ

By

Published : Jan 2, 2022, 1:45 PM IST

ನವದೆಹಲಿ:ಒಂದು ಸಮುದಾಯದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಆ್ಯಪ್‌ವೊಂದು ಕೆಲಸ ಮಾಡುತ್ತಿರುವ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಆ್ಯಪ್‌ಗೆ ನಿರ್ಬಂಧ ವಿಧಿಸಲಾಗಿದೆ.

ಗಿಟ್‌ಹಬ್ ಪ್ಲಾಟ್‌ಫಾರ್ಮ್‌ನಲ್ಲಿ ರಚಿಸಲಾದ 'ಬುಲ್ಲಿ ಬಾಯಿ' ಹೆಸರಿನ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಪತ್ರಕರ್ತೆ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತಾಗಿ ದೆಹಲಿ ಆಗ್ನೇಯ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 509ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗಿಟ್‌ಹಬ್‌ ಆ್ಯಪ್‌ನಲ್ಲಿ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್‌ಲೋಡ್ ಮಾಡಿ ಹರಾಜು ಮಾಡಿದ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಕೆಲವು ತಿಂಗಳ ಹಿಂದಷ್ಟೇ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಘಟನೆ ಸಂಬಂಧ ನಿನ್ನೆ ರಾತ್ರಿ ಟ್ವೀಟ್‌ ಮಾಡಿರುವ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಈ ಕುರಿತು ಕ್ರಮ ತೆಗೆದುಕೊಳ್ಳಲಾಗಿದೆ. ಬುಲ್ಲಿ ಬಾಯಿ ಅಪ್ಲಿಕೇಶನ್‌ ಹಿಂದೆ ಇರುವ ಗಿಟ್‌ಹಬ್ ಬಳಕೆದಾರರನ್ನು ನಿರ್ಬಂಧಿಸಲಾಗಿದ್ದು, ಮುಂದಿನ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆಯೇ ಬಳಕೆದಾರರನ್ನು ನಿರ್ಬಂಧಿಸಿರುವುದನ್ನು ಗಿಟ್‌ಹಬ್ಬ ದೃಢಪಡಿಸಿದೆ. ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT) ಮತ್ತು ಪೊಲೀಸ್ ಅಧಿಕಾರಿಗಳು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎಂದು ಶಿವಸೇನೆಯ ರಾಜ್ಯಸಭೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಮಾಡಿದ ಟ್ವೀಟ್‌ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿದ್ದಾರೆ.

ಮಹಿಳೆಯರನ್ನು ಗುರಿಯಾಗಿಸುವ ಇಂತಹ ಅತಿರೇಕದ ಸ್ತ್ರೀದ್ವೇಷಿ ಮತ್ತು ಕೋಮುವಾದದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನಾನು ಪದೇ ಪದೇ ಕೇಳಿಕೊಂಡಿದ್ದೇನೆ. ಅದನ್ನು ನಿರ್ಲಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರಿಯಾಂಕಾ ಕಿಡಿಕಾರಿದ್ದರು.

ಇದಾದ ಬಳಿಕ ಸಚಿವರು ಕ್ರಮ ಕೈಗೊಂಡಿರುವ ಬಗ್ಗೆ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದು, ಪ್ರಿಯಾಂಕಾ ಚತುರ್ವೇದಿ ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ:ಆರ್ಥಿಕ ದುರ್ಬಲ ವರ್ಗದ ಮೀಸಲಾತಿ ನಿಯಮ ಮುಂದಿನ ವರ್ಷ ಪರಿಷ್ಕರಣೆ- ಕೇಂದ್ರ ಸರ್ಕಾರ

For All Latest Updates

TAGGED:

ABOUT THE AUTHOR

...view details