ಚಿಕ್ಕಬಳ್ಳಾಪುರ:ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೈತ್ರಿ ಸರ್ಕಾರ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುವುದರಲ್ಲಿ ಬೇರೆ ಮಾತಿಲ್ಲ. ಹೀಗಿರುವಾಗ ಜಿಲ್ಲಾಡಳಿತ ಮಾತ್ರ ಮತದಾನದ ಸಂಖ್ಯೆಯನ್ನು ಹೆಚ್ಚಿಸಲು ಸಾಕಷ್ಟು ಕಸರತ್ತು ನಡೆಸುತ್ತಿದೆ.
ಮತದಾನದ ಅರಿವು ಮೂಡಿಸಲು ದೇಶಾದ್ಯಂತ ಹಲವು ಸ್ಟಾರ್ಗಳು ಸೇರಿದಂತೆ ಜಾಹೀರಾತುಗಳ ಮುಖಾಂತರ ಪ್ರಚಾರ ಮಾಡಲಾಗುತ್ತಿದೆ. ಹಾಗೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೂಡಾ ಮತದಾನವನ್ನು ಹೆಚ್ಚಿಸಲು ಸಾಕಷ್ಟು ಕಸರತ್ತು ನಡೆಯುತ್ತಿದೆ.
ಪೋಸ್ಟ್ ಮೂಖಾಂತರ ಮತದಾನದ ಅರಿವು..
ಚಿಕ್ಕಬಳ್ಳಾಪುರ ನಗರದಾದ್ಯಂತ ಈ ಬಾರಿ ಹೆಚ್ಚಿನ ಮತದಾನವನ್ನು ಮಾಡಿಸಲು ನಿರ್ಧರಿಸಿರುವ ಜಿಲ್ಲಾಡಳಿತ, ಖಾಸಗಿ ಬಸ್ ಸೇರಿದಂತೆ ಟಿಟಿ ವಾಹನಗಳ ಮೇಲೆ ಜಾಹೀರಾತು ನೀಡಿ ಮತಾದಾನದ ಬಗ್ಗೆ ಅರಿವು ಮೂಡಿಸುತ್ತಿದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಗೆ ಪತ್ರವನ್ನು ಬರೆಯುವ ಮೂಲಕ ಮತದಾನವನ್ನು ಮಾಡಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಿಕೊಳ್ಳಿ ಎಂದು ಮನವಿ ಮಾಡುತ್ತಿದ್ದಾರೆ.