ಕರ್ನಾಟಕ

karnataka

ETV Bharat / entertainment

ಬಿಜೆಪಿ ಜೊತೆಗಿನ 25 ವರ್ಷದ ಒಡನಾಟಕ್ಕೆ ಗುಡ್​ ಬೈ ಹೇಳಿದ ನಟಿ ಗೌತಮಿ ತಡಿಮಲ್ಲ - ಈಟಿವಿ ಭಾರತ ಕನ್ನಡ

'ತಮಗೆ ವಂಚಿಸಿದ ವ್ಯಕ್ತಿಯ ಪರವಾಗಿ ಪಕ್ಷವು ನಿಂತಿದೆ' ಎಂದು ಆರೋಪಿಸಿ, ಖ್ಯಾತ ನಟಿ ಗೌತಮಿ ತಡಿಮಲ್ಲ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

Actor-politician Gautami Tadimalla quits BJP
ಬಿಜೆಪಿ ಜೊತೆಗಿನ 25 ವರ್ಷದ ಒಡನಾಟಕ್ಕೆ ಗುಡ್​ ಬೈ ಹೇಳಿದ ನಟಿ ಗೌತಮಿ ತಡಿಮಲ್ಲ

By ETV Bharat Karnataka Team

Published : Oct 23, 2023, 11:52 AM IST

ಚೆನ್ನೈ (ತಮಿಳುನಾಡು):ಲೋಕಸಭೆ ಚುನಾವಣೆಯ ತಯಾರಿಯಲ್ಲಿರುವಬಿಜೆಪಿಗೆ ತಮಿಳುನಾಡಿನಲ್ಲಿ ಭಾರಿ ಹಿನ್ನಡೆಯಾಗಿದೆ. ಖ್ಯಾತ ನಟಿ ಹಾಗೂ ಬಿಜೆಪಿ ನಾಯಕಿ ಗೌತಮಿ ತಡಿಮಲ್ಲ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 'ತಮಗೆ ವಂಚಿಸಿದ ವ್ಯಕ್ತಿಯ ಪರವಾಗಿ ಪಕ್ಷವು ನಿಂತಿದೆ' ಎಂದು ಆರೋಪಿಸಿ, ಕೇಸರಿ ಜೊತೆಗಿನ ತಮ್ಮ 25 ವರ್ಷಗಳ ಒಡನಾಟವನ್ನು ಕೊನೆಗೊಳಿಸಿದ್ದಾರೆ.

ಈ ಕುರಿತು ಸೋಷಿಯಲ್​ ಮೀಡಿಯಾ 'ಎಕ್ಸ್​'ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಅವರು, "ಅತ್ಯಂತ ಭಾರವಾದ ಮನಸ್ಸು ಮತ್ತು ಭ್ರಮನಿರಸನದಿಂದ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು 25 ವರ್ಷಗಳ ಹಿಂದೆ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ನಿರ್ಧರಿಸಿ ಪಕ್ಷಕ್ಕೆ ಸೇರಿದ್ದೆ. ನನ್ನ ಜೀವನದಲ್ಲಿ ನಾನು ಎದುರಿಸಿದ ಎಲ್ಲಾ ಸವಾಲುಗಳ ಹೊರತಾಗಿಯೂ ನಾನು ಆ ಬದ್ಧತೆಯನ್ನು ಗೌರವಿಸಿದ್ದೇನೆ. ಆದರೆ ಇಂದು ನಾನು ಜೀವನದಲ್ಲಿ ಊಹಿಸಲಾಗದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ನಿಂತಿದ್ದೇನೆ. ಪಕ್ಷ ಮತ್ತು ಮುಖಂಡರಿಂದ ಯಾವುದೇ ರೀತಿಯ ಬೆಂಬಲ ಪಡೆಯಲು ಸಾಧ್ಯವಾಗಿಲ್ಲ" ಎಂದು ಹೇಳಿದ್ದಾರೆ.

"ನಾನು 17ನೇ ವಯಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. ನನ್ನ ವೃತ್ತಿಜೀವನವು 37 ವರ್ಷಗಳ ಕಾಲ ಸಿನಿಮಾ, ದೂರದರ್ಶನ, ರೇಡಿಯೋ ಮತ್ತು ಡಿಜಿಟಲ್​ ಮಾಧ್ಯಮದಲ್ಲಿ ವ್ಯಾಪಿಸಿದೆ. ಈ ವಯಸ್ಸಿನಲ್ಲಿ ಆರ್ಥಿಕವಾಗಿ ಸುಭದ್ರವಾಗಿರಲು ಮತ್ತು ನನ್ನ ಮಗಳ ಭವಿಷ್ಯಕ್ಕಾಗಿ ನಾನು ನನ್ನ ಇಡೀ ಜೀವನ ಕೆಲಸ ಮಾಡಿದ್ದೇನೆ. ನಾನು ಮತ್ತು ನನ್ನ ಮಗಳು ಸ್ಥಿರವಾಗಿ ಮತ್ತು ಸುರಕ್ಷಿತವಾಗಿರಬೇಕಾದ ಸ್ಥಳದಲ್ಲಿ ನಾನು ಈಗ ನಿಂತಿದ್ದೇನೆ" ಎಂದಿದ್ದಾರೆ.

ಇದನ್ನೂ ಓದಿ:ನಿತೀಶ್​ ಕುಮಾರ್​​ಗೆ ಶಾಕ್​​.. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಿತನ್ ರಾಮ್ ಮಾಂಝಿ ಪುತ್ರ

"ನನಗೆ ಪಕ್ಷ ಮತ್ತು ನಾಯಕರಿಂದ ಯಾವುದೇ ಬೆಂಬಲ ಸಿಗುತ್ತಿಲ್ಲ. ನಿರ್ದಿಷ್ಟ ವ್ಯಕ್ತಿಯೊಬ್ಬರು ನನಗೆ ಹಣ, ಆಸ್ತಿ ಹಾಗೂ ದಾಖಲೆಗಳನ್ನು ವಂಚಿಸಿದ್ದಾರೆ. ನಂಬಿಕೆಗೆ ದ್ರೋಹ ಮಾಡಿದ ಅವರಿಗೆ ಪಕ್ಷದ ನಾಯಕರು ಸಹಾಯ ಮಾಡುತ್ತಿದ್ದು, ಅವರನ್ನು ಬೆಂಬಲಿಸುತ್ತಿರುವುದು ನನಗೆ ತಿಳಿದಿದೆ" ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

"ಏನೇ ಇರಲಿ, ನಾನು ಪಕ್ಷಕ್ಕೆ ನನ್ನ ಬದ್ಧತೆಯನ್ನು ಉಳಿಸಿಕೊಂಡಿದ್ದೇನೆ. ಆದರೆ 25 ವರ್ಷ ಪಕ್ಷಕ್ಕೆ ನಿಷ್ಠಯಿಂದ ಕೆಲಸ ಮಾಡಿದ್ದರೂ, ಬೆಂಬಲದ ಕೊರತೆಯಿದೆ. ತುಂಬಾ ದುಃಖ ಮತ್ತು ನೋವಿನಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್​ಗೆ ಗೌತಮಿ ತಡಿಮಲ್ಲರವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಟ್ಯಾಗ್​ ಮಾಡಿದ್ದಾರೆ.

ಇದನ್ನೂ ಓದಿ:ಜಾತಿ ತಾರತಮ್ಯ, ಲೈಂಗಿಕ ಕಿರುಕುಳದಿಂದ ಬೇಸತ್ತು ಪುದುಚೇರಿ ಮಹಿಳಾ ಸಚಿವೆ ರಾಜೀನಾಮೆ!

ABOUT THE AUTHOR

...view details