ಕರ್ನಾಟಕ

karnataka

ETV Bharat / entertainment

'ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ'.. FIR ತಡೆಗೆ ಉಪೇಂದ್ರ ಟ್ವೀಟ್​

ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದ ಬೆನ್ನಲ್ಲೇ ನಟ ಉಪೇಂದ್ರ ಟ್ವೀಟ್​ ಮಾಡಿ ತಮ್ಮನ್ನು ಪ್ರೀತಿಸುವವರಿಗೆ ಧನ್ಯವಾದ ತಿಳಿಸಿದ್ದಾರೆ.

By

Published : Aug 14, 2023, 6:24 PM IST

Updated : Aug 14, 2023, 7:59 PM IST

Upendra
ಉಪೇಂದ್ರ

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ಇಂದು ತಡೆ ನೀಡಿದೆ. ಈ ಬೆನ್ನಲ್ಲೇ ಸೋಷಿಯಲ್​ ಮೀಡಿಯಾದಲ್ಲಿ ನಟ ತಮ್ಮನ್ನು ಪ್ರೀತಿಸುವವರಿಗೆ, ಬೆಂಬಲವಾಗಿ ನಿಂತವರಿಗೆ ಧನ್ಯವಾದ ತಿಳಿಸಿದ್ದಾರೆ. "ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ, ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ… ನನಗೆ ಕೊಡೆ. ಧನ್ಯವಾದಗಳು" ಎಂದು ಟ್ವೀಟ್​ ಮಾಡಿದ್ದಾರೆ.

ಇತ್ತೀಚೆಗೆ ಫೇಸ್​ಬುಕ್​ ಲೈವ್​ನಲ್ಲಿ ವಿಡಿಯೋ ಮಾಡುವ ಸಂದರ್ಭದಲ್ಲಿ ಒಂದು ಸಮುದಾಯದ ಕುರಿತು ಆಕ್ಷೇಪಾರ್ಹ ಗಾದೆಮಾತು ಬಳಕೆ ಮಾಡಿದ್ದ ಆರೋಪದಲ್ಲಿ ದಾಖಲಾಗಿರುವ ಎಫ್​ಐಆರ್​ ರದ್ದು ಕೋರಿ ಉಪೇಂದ್ರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್​ ಎಫ್​ಐಆರ್​ಗೆ ಇಂದು ತಡೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:Upendra: ನಟ ಉಪೇಂದ್ರಗೆ ಹೈಕೋರ್ಟ್‌ ರಿಲೀಫ್‌; FIRಗೆ ತಡೆ

ಎಫ್​ಐಆರ್ ವಿವರ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್​ಐಆರ್​ನಲ್ಲಿ, ಉಪೇಂದ್ರ ಸಾಮಾಜಿಕ ಜಾಲತಾಣದ ಕಾರ್ಯಕ್ರಮದ ನೇರಪ್ರಸಾರದಲ್ಲಿ ಮಾತನಾಡುವಾಗ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಇದರಿಂದ ಒಂದು ಸಮಾಜದ ಭಾವನೆಗಳಿಗೆ ಘಾಸಿ ಉಂಟಾಗಿದೆ. ನಟನಾಗಿ ಉಪೇಂದ್ರ ಅವರು ಎಲ್ಲರಿಗೂ ಮಾದರಿಯಾಗಿ ನಡೆದುಕೊಳ್ಳಬೇಕಿತ್ತು. ಈ ಸಂಬಂಧ ನಟನ ವಿರುದ್ಧ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ ಕಾಯ್ದೆ -1989) ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು.

ಇದನ್ನೂ ಓದಿ:ಆಕ್ಷೇಪಾರ್ಹ ಪದ ಬಳಕೆ ಆರೋಪ: ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್

ಹೇಳಿಕೆಗೆ ಕ್ಷಮೆ ಯಾಚಿಸಿದ್ದ ಉಪೇಂದ್ರ:ಶನಿವಾರ ಫೇಸ್‌ಬುಕ್ ಮತ್ತು ಇನ್ಸ್‌ಟಾಗ್ರಾಮ್ ಲೈವ್​ನಲ್ಲಿ ಮಾತನಾಡಿದ್ದ ಉಪೇಂದ್ರ, ಬಾಯ್ತಪ್ಪಿ ಒಂದು ಗಾದೆ ಮಾತು ಬಳಸಿದ್ದೆ. ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡುಬಂದಿದೆ. ತಕ್ಷಣವೇ ಆ ಲೈವ್ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದೇನೆ. ನನ್ನ ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದರು.

ಅದರ ನಂತರ ಟ್ವೀಟ್​ ಮಾಡಿದ್ದ ಅವರು, "ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ?" ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ: ಸಚಿವ ಮಹದೇವಪ್ಪ

Last Updated : Aug 14, 2023, 7:59 PM IST

ABOUT THE AUTHOR

...view details