ಕರ್ನಾಟಕ

karnataka

By ETV Bharat Karnataka Team

Published : Oct 2, 2023, 1:47 PM IST

ETV Bharat / entertainment

ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಅಂತಿದ್ದಾರೆ 'ತಾರಿಣಿ'!

ನಟಿ ಮಮತ ರಾಹುತ್ ತಾರಿಣಿ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು, ಗರ್ಭಿಣಿಯ ಕಥೆಯನ್ನು ಈ ಚಿತ್ರಕಥೆ ಹೊಂದಿದೆ.

'ತಾರಿಣಿ' ಟೀಂ
'ತಾರಿಣಿ' ಟೀಂ

ಬೋಲ್ಡ್ ನಟನೆಯಿಂದಲೇ ಕನ್ನಡಿಗರ ಮನಗೆದ್ದಿರುವ ನಟಿ ಮಮತ ರಾಹುತ್. ಇದೀಗ ತಾರಿಣಿ ಎಂಬ ಸಿನಿನಮಾ ಮಾಡ್ತಾ ಇದ್ದು, ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಅಂತಾ ಹೇಳೋದಕ್ಕೆ ಹೊರಟ್ಟಿದ್ದಾರೆ. ಮಮತ ರಾಹುತ್ ಮುಖ್ಯ ಭೂಮಿಕೆಯಲ್ಲಿರೋ ತಾರಿಣಿ ಚಿತ್ರವನ್ನು, ಸಿದ್ದು ಪೂರ್ಣಚಂದ್ರ ನಿರ್ದೇಶನ ಮಾಡಿದ್ದು, ಈ ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಯಿತು. ಸಾಹಿತಿ, ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಹಲವು ಗಣ್ಯರು ತಾರಿಣಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಒಳ್ಳೆಯದು ಆಗಲಿ ಅಂತಾ ಆರ್ಶೀವದಿಸಿದ್ದರು.

ತಾರಿಣಿ ಗರ್ಭಿಣಿ ಹೆಣ್ಣಿನ ಕಥೆಯನ್ನು ಹೊಂದಿರುವ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಈ ಚಿತ್ರದ ವಿಶೇಷವೆಂದರೆ, ನಾಯಕಿ ಮಮತ ರಾಹುತ್ ಅವರು ಗರ್ಭಿಣಿ ಇರುವಾಗಲೇ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಗರ್ಭಿಣಿ ಕುರಿತಾದ ಚಿತ್ರದಲ್ಲಿ ನಿಜವಾದ ಗರ್ಭಿಣಿಯೇ ನಟಿಸಿದ್ದಾರೆ. ಮಗು ಆದ ನಂತರವೂ ಅಭಿನಯಿಸಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಉತ್ತಮ ಸಂದೇಶವಿರುವ ಈ ಚಿತ್ರವನ್ನು ಮಮತ ರಾಹುತ್ ಅವರ ಪತಿ ಸುರೇಶ್ ಕೊಟ್ಯಾನ್ ಚಿತ್ರಾಪು ಅವರು ಶ್ರೀಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ ಅಂದರು‌.

ಬಳಿಕ ಮಾತನಾಡಿದ ಮಮತಾ ರಾಹುತ್ ನಾನು ಏಳು ತಿಂಗಳ ಗರ್ಭಿಣಿ ಇದ್ದಾಗ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡೆ. ಕೆಲವು ದಿನಗಳ ಚಿತ್ರೀಕರಣ ನಂತರ ನನಗೆ ಅವಧಿಗೂ ಕೆಲವು ದಿನಗಳ ಮುಂಚೆಯೇ ಹೆರಿಗೆ ಆಯಿತು. ಆನಂತರ ಕೂಡ ನಾನು ಚಿತ್ರೀಕರಣದಲ್ಲಿ ಭಾಗಿಯಾದೆ. ನನ್ನ ಮಗು ಕೂಡ ಈ ಚಿತ್ರದಲ್ಲಿ ಅಭಿನಯಿಸಿದೆ. ಇಂದು ನಾನು ನಿಮ್ಮೆಲ್ಲರಿಗೂ ನನ್ನ ಮಗುವನ್ನು ಪರಿಚಯಿಸುತ್ತಿದ್ದೇನೆ. ನಮ್ಮ ಮೊದಲ ನಿರ್ಮಾಣದ ಚಿತ್ರವಾಗಿರುವುದರಿಂದ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿತ್ತು. ಚಿತ್ರ ಚೆನ್ನಾಗಿಯೇ ಬಂದಿದೆ ಎಂದರು.

ಇನ್ನು ತಾರಿಣಿ ಚಿತ್ರದಲ್ಲಿ ಮಮತ ರಾಹುತ್ ಅಲ್ಲದೇ ನಾಯಕನಾಗಿ ರೋಹಿತ್ ಅಭಿನಯಿಸಿದ್ದಾರೆ. ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಡಾ||ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮಿ, ದೀಪಿಕಾಗೌಡ, ಸನ್ನಿ, ತೇಜಸ್ವಿನಿ, ಕವಿತ ಕಂಬಾರ್, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್ ಜಿತಿನ್ ಕೋಟ್ಯಾನ್, ಮಟಿಲ್ಡಾ ಡಿಸೋಜ, ಅರ್ಚನ ಗಾಯಕ್ವಾಡ್, ಶೀಬಾ ಮೂರ್ತಿ, ಶ್ವೇತಾ, ಚೈತ್ರ, ಮಂಜು ನಂಜನಗೂಡು, ರಘು ಸಮರ್ಥ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇನ್ನು ನಿರ್ಮಾಪಕ ಸುರೇಶ್ ಕೊಟ್ಯಾನ್ ಚಿತ್ರಾಪು ಮಾತನಾಡಿ, ನಮ್ಮ ಮೊದಲ ನಿರ್ಮಾಣದ ಚಿತ್ರವಿದು. ಒಳ್ಳೆಯ ಕಥೆ ನೀಡಿರುವ ನಿರ್ದೇಶಕರಿಗೆ, ಆ ಕಥೆಗೆ ಜೀವ ತುಂಬಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನನ್ನ ಧನ್ಯವಾದ. ಸಮಾಜಕ್ಕೆ ಈ ಚಿತ್ರ ಉತ್ತಮ ಸಂದೇಶ ಕೊಡಲಿದೆ ಎಂದರು. ಬಹುತೇಕ ಶೂಟಿಂಗ್ ಮುಗಿಸಿರೋ ತಾರಣಿ ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ.

ಇದನ್ನೂ ಓದಿ:ನಿಖಿಲ್ ಶೂಟಿಂಗ್ ಸೆಟ್​ಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭೇಟಿ... ಅಭಿಮಾನಿಗಳಲ್ಲಿ ಕುತೂಹಲ

ABOUT THE AUTHOR

...view details