ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರು ಪುಷ್ಪ ದಿ ರೈಸ್ ಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ನಟ ಅಲ್ಲು ಅರ್ಜುನ್ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಿತ್ರದ ಮುಂದುವರಿದ ಭಾಗವಾದ 'ಪುಷ್ಪ: ದಿ ರೂಲ್' ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.
ಇನ್ನು ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರಕ್ಕೆ ಆರು ಪ್ರಶಸ್ತಿಗಳು ಲಭಿಸಿವೆ. ಈ ಚಿತ್ರದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಪುಷ್ಪ ಚಿತ್ರದ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರೊಂದಿಗೆ ಹಂಚಿಕೊಂಡರು. ಎಸ್ಎಸ್ ರಾಜಮೌಳಿ ನಿರ್ದೇಶನದ ಚಲನಚಿತ್ರವು ಆರೋಗ್ಯಕರ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ, ಕಾಲಭೈರವ ಅವರಿಗೆ ಅತ್ಯುತ್ತಮ ಪುರುಷ ಹಿನ್ನೆಲೆ ಗಾಯಕ, ಅತ್ಯುತ್ತಮ ಸ್ಪೆಷಲ್ ಎಫೆಕ್ಟ್ಗಳು, ಅತ್ಯುತ್ತಮ ಸಾಹಸ ನಿರ್ದೇಶಕ ಮತ್ತು ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಪ್ರಶಸ್ತಿಗಳು ತಮ್ಮದಾಗಿಸಿಕೊಂಡವು.
ಗುರುವಾರ ಪ್ರಕಟವಾದ 2021 ರ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ ಹಿಂದಿ ಚಲನಚಿತ್ರ 'ರಾಕೆಟ್ರಿ: ದಿ ನಂಬಿ ಎಫೆಕ್ಟ್' ಅತ್ಯುತ್ತಮ ಚಲನಚಿತ್ರ ಎಂದು ಹೆಸರಿಸಲ್ಪಟ್ಟಿದೆ ಮತ್ತು ಅಲ್ಲು ಅರ್ಜುನ್, ಆಲಿಯಾ ಭಟ್ ಮತ್ತು ಕೃತಿ ಸನೋನ್ ಅವರು ಅತ್ಯುತ್ತಮ ಅಭಿನಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಿವುಡ್ ತಾರೆಯರಾದ ಭಟ್ ಮತ್ತು ಸನೋನ್ ಅವರು ಕ್ರಮವಾಗಿ 'ಗಂಗೂಬಾಯಿ ಕಥಿಯಾವಾಡಿ' ಮತ್ತು 'ಮಿಮಿ' ಚಿತ್ರದಲ್ಲಿನ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು.