ಪ್ರತಿಷ್ಠಿತ ಆಸ್ಕರ್ ಅವಾರ್ಡ್ ವಿಜೇತ 'ದಿ ಎಲಿಫೆಂಟ್ ವಿಸ್ಪರರ್ಸ್' ಡಾಕ್ಯುಮೆಂಟರಿ ಸಿನಿಮಾದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ವಿರುದ್ಧ ಬೆಲ್ಲಿ ಹಾಗೂ ಬೊಮ್ಮನ್ ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷ್ಯಚಿತ್ರವನ್ನು ಚಿತ್ರೀಕರಣ ಮಾಡುವ ವೇಲೆ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ತಮ್ಮೊಂದಿಗೆ ಬಹಳ ಆತ್ಮೀಯವಾಗಿದ್ದರು. ಆದರೆ, ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದ ನಂತರ ಅವರು ಬದಲಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಫೋನ್ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ ಹಾಗೂ ತಮಗೆ ಇದುವರೆಗೆ ಹಣ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ ಬೆಳ್ಳಿ ಹಾಗೂ ಬೊಮ್ಮನ್ ಅವರು ಆಸ್ಕರ್ ವಿಜೇತ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮೇಲೆ ಹಣ ಹಿಂತಿರುಗಿಸದೇ ಇರುವ ಗಂಭೀರ ಆರೋಪ ಮಾಡಿದ್ದಾರೆ.
"ಸಾಕ್ಷ್ಯಚಿತ್ರ ಶೂಟಿಂಗ್ ಸಮಯದಲ್ಲಿ ನಿರ್ದೇಶಕಿ ಕಾರ್ತಿನಿ ಗೊನ್ಸಾಲ್ವಿಸ್ ಅವರು ನಮ್ಮೊಂದಿಗೆ ತುಂಬಾ ಚೆನ್ನಾಗಿದ್ದರು. ಶೂಟಿಂಗ್ ಸಮಯದಲ್ಲಿ ಒಂದು ದಿನ ನಮ್ಮ ಬಳಿ ಬಂದು, ಒಂದು ಮದುವೆಯ ದೃಶ್ಯ ಶೂಟ್ ಮಾಡಲು ಬಯಸುವುದಾಗಿ ಹೇಳಿದ್ದರು. ಅವರ ಬಳಿ ಹಣವಿಲ್ಲದ ಕಾರಣ ನಮ್ಮ ಬಳಿ ಅದರ ವ್ಯವಸ್ಥೆ ಮಾಡಲು ಕೇಳಿದರು. ಮೊಮ್ಮಗಳ ವಿದ್ಯಾಭ್ಯಾಸ್ಕಾಗಿ ಬೆಲ್ಲಿ ಕೂಡಿಟ್ಟಿದ್ದ ಹಣವನ್ನು ನಾವೇ ತೆಗೆದು ಅವರಿಗೆ ಕೊಟ್ಟೆವು. ಮದುವೆ ಸಮಾರಂಭದ ದೃಶ್ಯದ ಚಿತ್ರೀಕರಣಕ್ಕಾಗಿ ನಾವು ಸುಮಾರು 1 ಲಕ್ಷ ರೂಪಾಯಿ ಖರ್ಚು ಮಾಡಿದೆವು. ನಾವು ಕರೆ ಮಾಡಿ ಕೇಳಿದಾಗ ಅದನ್ನು ಹಿಂದಿರುಗಿಸುವುದಾಗಿ ಹೇಳಿದ್ದರು. ಆದರೆ, ಇದುವರೆಗೆ ಮಾಡಿಲ್ಲ. ಆದರೆ ನಾವು ಕರೆ ಮಾಡಿದಾಗ ಬ್ಯುಸಿ ಇದ್ದೇನೆ ಎಂದು ಹೇಳಿ ಕಾಲ್ ಕಟ್ ಮಾಡುತ್ತಿದ್ದಾರೆ" ಎಂದು ದುಃಖ ತೋಡಿಕೊಂಡಿದ್ದಾರೆ.