ಕರ್ನಾಟಕ

karnataka

By

Published : Jun 1, 2022, 6:26 PM IST

ETV Bharat / entertainment

ಪೋತಿನೇನಿ ಜೊತೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಕೈಹಾಕಿದ ಬೋಯಪಾಟಿ; ಕನ್ನಡದಲ್ಲೂ ತೆರೆಗೆ ಬರಲಿದೆ ಈ ಚಿತ್ರ

ಕನ್ನಡ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು, ಇತ್ತೀಚಿನ ಮಾರುಕಟ್ಟೆ ಕಂಡು ಇದೀಗ ಬೇರೆ ಬೇರೆ ಭಾಷೆಯ ಸಿನಿಮಾಗಳು ಕನ್ನಡದಲ್ಲೂ ಬಿಡುಗಡೆ ಆಗುವ ಟ್ರೆಂಡ್ ಶುರುವಾಗಿದೆ. ಆ ಸಾಲಿಗೆ ಇದೀಗ ಈ ಸಿನಿಮಾ ಕೂಡ ಸೇರಿಕೊಳ್ಳುತ್ತಿದೆ.

Boyapati Srinu pan India project with Ram Pothineni
ಚಿತ್ರದ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ತಾರಾ ಬಳಗ

ಭದ್ರ, ತುಳಸಿ, ಸಿಂಹ, ಲೆಜೆಂಡ್‌, ಸರೈನೋಡು, ಜಯಜಾನಕಿ ನಾಯಕ ಮತ್ತು ಇತ್ತೀಚೆಗಷ್ಟೇ ತೆರೆ ಕಂಡು ಬ್ಲಾಕ್‌ ಬಸ್ಟರ್‌ ಹಿಟ್‌ ಸಿನಿಮಾ ʻಅಖಂಡʼ ಚಿತ್ರಗಳನ್ನು ನಿರ್ದೇಶಿಸಿದ 'ಬೋಯಪಾಟಿ ಶ್ರೀನು' ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಯಶಸ್ವಿ ನಿರ್ದೇಶಕರಲ್ಲೊಬ್ಬರು. ಇವರು ಇದೀಗ ಟಾಲಿವುಟ್​​ನ ಸ್ಟಾರ್‌ ನಟರಲ್ಲೊಬ್ಬರಾದ ರಾಮ್‌ ಪೋತಿನೇನಿ ಜೊತೆಗೂಡಿ ಪ್ಯಾನ್‌ ಇಂಡಿಯಾ ಚಿತ್ರವನ್ನು ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ಇದೇ ಬ್ಯಾನರ್‌ (ಶ್ರೀನಿವಾಸ ಸಿಲ್ವರ್‌ ಸ್ಕ್ರೀನ್ಸ್‌) ನಡಿ ತಯಾರಾದ ʻದಿ ವಾರಿಯರ್‌ʼ ಚಿತ್ರೀಕರಣವನ್ನು ಮುಗಿಸಿದ ರಾಮ್‌ ಪೋತಿನೇನಿಗೆ ಇದು 20ನೇ ಚಿತ್ರವಾಗಿದೆ.

ಚಿತ್ರದ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ತಾರಾ ಬಳಗ

ಇದೀಗ ಪ್ಯಾನ್‌ ಇಂಡಿಯಾ ಚಿತ್ರಕ್ಕಾಗಿ ರಾಮ್‌ ಪೋತಿನೇನಿ, ಬೋಯಪಾಟಿ ಮತ್ತು ಶ್ರೀನಿವಾಸ ಚಿತ್ತೂರಿ ಒಂದಾಗಿದ್ದು, ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಜೂನ್‌ 1ರ ಬುಧವಾರ ಹೈದರಾಬಾದ್​​ನಲ್ಲಿ ನೆರವೇರಿತು. ಚಿತ್ರರಂಗದಲ್ಲಿ ಇದೊಂದು ಬಿಗ್​ ಬಜೆಟ್​ ಸಿನಿಮಾ ಆಗಲಿದ್ದು, ಹಲವು ಭಾಷೆಗಳಲ್ಲಿ ತೆರೆಗೆ ತರುವ ತವಕ ಇಟ್ಟುಕೊಂಡಿದ್ದಾರೆ.

ಚಿತ್ರದ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ತಾರಾ ಬಳಗ

ಬೋಯಪಾಟಿ ಶ್ರೀನು ಅವರಿಗೆ ಇದು 10ನೇ ಚಿತ್ರವಾಗಿದೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರಾದ ಶ್ರೀನಿವಾಸ ಚಿತ್ತೂರಿ ಅವರ ಶ್ರೀನಿವಾಸ ಸಿಲ್ವರ್‌ ಸ್ಕ್ರೀನ್ಸ್‌ ಬ್ಯಾನರ್‌ ನಡಿ 'ಬೋಯಪಾತಿರಾಪೋ' (ತಾತ್ಕಾಲಿಕ ಹೆಸರು) ಎಂಬ ಹೆಸರಿನ ಚಿತ್ರ ನಿರ್ಮಾಣಗೊಳ್ಳುತ್ತಿದೆ. ಶ್ರೀನಿವಾಸ ಸಿಲ್ವರ್‌ ಸ್ಕ್ರೀನ್ಸ್​ನ 9ನೇ ಚಿತ್ರ ಇದಾಗಿದೆ. ಚಿತ್ರದ ನಾಯಕ ರಾಮ್‌ ಪೋತಿನೇನಿ ತೆಲುಗು ಚಿತ್ರರಂಗವಷ್ಟೇ ಅಲ್ಲದೆ ಭಾರತದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ನಟ. ಅವರ ಸಿನಿಮಾಗಳು ಹಿಂದಿ ಭಾಷೆಗೆ ಡಬ್‌ ಆಗಿ ಯೂಟ್ಯೂಬ್‌ನಲ್ಲಿ ಭಾರಿ ಜನಪ್ರಿಯತೆ ಗಳಿಸಿವೆ.

ಚಿತ್ರದ ಮುಹೂರ್ತ

ಈ ಕ್ರೇಜಿ ಕಾಂಬಿನೇಶನ್‌ ಬಗ್ಗೆ ಮಾತನಾಡಿದ ಶ್ರೀನಿವಾಸ ಚಿತ್ತೂರಿ, ಬೋಯಪಾಟಿ ಶ್ರೀನು ನಿರ್ದೇಶನದ ಚಿತ್ರ ನಿರ್ಮಾಣ ಮಾಡಲು ನಾವು ಸಂತೋಷಪಡುತ್ತೇವೆ. ʻದಿ ವಾರಿಯರ್‌ʼ ಚಿತ್ರದ ಶೂಟಿಂಗ್‌ ಮುಗಿಯುತ್ತಿದ್ದಂತೆ ನಮ್ಮ ನಾಯಕ ರಾಮ್‌ ಪೋತಿನೇನಿ ಜೊತೆ ಮತ್ತೊಂದು ಸಿನಿಮಾ ಶುರುವಾಗಿರುವುದು ಸಂತೋಷದ ವಿಚಾರ. ಇದು ನಮ್ಮ ಬ್ಯಾನರ್‌ನ ಪ್ರತಿಷ್ಠಿತ ಚಿತ್ರವಾಗಿದ್ದು, ಉನ್ನತ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗುವುದು. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆ ಮಾಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಚಿತ್ರದ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ತಾರಾ ಬಳಗ

ನಿರ್ದೇಶಕ ಬೋಯಪಾಟಿ ಶ್ರೀನು ಬರೆದಿರುವ ಮಾಸ್‌ ಅಂಶಗಳಿಂದ ಕೂಡಿರುವ ಅದ್ಭುತ ಕತೆ ಕೇಳಿರುವ ನಿರ್ಮಾಪಕ ಮತ್ತು ನಟ ಇಬ್ಬರೂ ಥ್ರಿಲ್‌ ಆಗಿದ್ದಾರೆ. ಚಿತ್ರದ ನಾಯಕಿ ಮತ್ತು ಉಳಿದ ತಾರಾಗಣದ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿಗಳನ್ನು ನೀಡುವುದಾಗಿ ಚಿತ್ರತಂಡ ಹೇಳಿದೆ.

ಚಿತ್ರದ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ತಾರಾ ಬಳಗ

ಇದನ್ನೂ ಓದಿ:ಸ್ನೇಹಿತೆಯನ್ನೇ ಬಾಳ ಸಂಗಾತಿಯನ್ನಾಗಿ ಬರಮಾಡಿಕೊಂಡ ಜನಪ್ರಿಯ ಕಿರುತೆರೆ ನಟ ಕರಣ್ ಗ್ರೋವರ್

ABOUT THE AUTHOR

...view details