ಕರ್ನಾಟಕ

karnataka

ETV Bharat / entertainment

777 ಚಾರ್ಲಿ ಸಿನಿಮಾ‌‌ ನೋಡಿ ನಾನು ಶ್ವಾನ ಪ್ರಿಯ ಎಂದ ಸಿಎಂ ಬಸವರಾಜ್ ಬೊಮ್ಮಾಯಿ! - ನಿರ್ದೇಶಕ ಕಿರಣ್ ರಾಜ್

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ರಾಜಕೀಯ ಕೆಲಸಗಳಿಂದ ಬಿಡುವು ಮಾಡಿಕೊಂಡು ಬೆಂಗಳೂರಿನ ಒರಾಯನ್ ಮಾಲ್ ಪಿವಿಆರ್ ಚಿತ್ರಮಂದಿರದಲ್ಲಿ 777 ಚಾರ್ಲಿ ಕನ್ನಡ ಚಲನಚಿತ್ರವನ್ನು ವೀಕ್ಷಿಸಿದ್ದಾರೆ.

CM basavaraja Bommai have watched Charli 777 with Rakshith Shetty
777 ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

By

Published : Jun 14, 2022, 8:46 AM IST

ಬೆಂಗಳೂರು:ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಯಾವುದೇ ಸ್ಟಾರ್ ಡಮ್ ಇಲ್ಲದೇ,‌ ಚಾರ್ಲಿ ಎಂಬ ಶ್ವಾನದ ಜೊತೆ ಅಭಿನಯಿಸಿರೋ ಸಿನಿಮಾ‌ 777 ಚಾರ್ಲಿ. ಕಳೆದ ಶುಕ್ರವಾರ ಕರ್ನಾಟಕ ಅಲ್ಲದೇ ವಿಶ್ವಾದ್ಯಂತ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿರುವ 777 ಚಾರ್ಲಿ, ಸಿನಿಮಾವನ್ನು ಸಾಮಾನ್ಯ ಪ್ರೇಕ್ಷಕರು ಅಲ್ಲದೇ ಸಿನಿಮಾ ತಾರೆಯರು ಹಾಗು ಗಣ್ಯರು ಮೆಚ್ಚಿಕೊಂಡಿದ್ದಾರೆ‌.

ಇದೀಗ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ತಮ್ಮ ರಾಜಕೀಯದಿಂದ ಬಿಡುವು ಮಾಡಿಕೊಂಡು, ಬೆಂಗಳೂರಿನ ಒರಾಯನ್ ಮಾಲ್​​ನಲ್ಲಿರುವ ಪಿವಿಆರ್ ಚಿತ್ರಮಂದಿರದಲ್ಲಿ 777 ಚಾರ್ಲಿ ಕನ್ನಡ ಚಲನಚಿತ್ರವನ್ನು ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್​, ಬಿ.ಸಿ.ನಾಗೇಶ, ಶಾಸಕ ರಘುಪತಿ ಭಟ್, ನಟ‌ ರಕ್ಷಿತ್ ಶೆಟ್ಟಿ ಹಾಗೂ ನಿರ್ದೇಶಕ ಕಿರಣ್ ರಾಜ್ ಉಪಸ್ಥಿತರಿದ್ದರು.

777 ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

777 ಚಾರ್ಲಿ ಸಿನಿಮಾ ನೋಡಿ, ಹೊರಗಡೆ ಬಂದ, ಸಿ‌ಎಂ‌ ಬಸವರಾಜ್ ಬೊಮ್ಮಾಯಿ ಮಾತನಾಡಿ, ಚಾರ್ಲಿ ಸಿನಿಮಾದ ಟ್ರೈಲರ್ ನೋಡಿ ನನಗೆ ಸಿನಿಮಾ ನೋಡಬೇಕು ಅನ್ನಿಸಿತು. ಯಾಕೆಂದರೆ ನಾನು ಕೂಡ ಶ್ವಾನ ಪ್ರಿಯ. ಮನುಷ್ಯನನ್ನು ಹೆಚ್ಚು ಪ್ರೀತಿ ಮಾಡೋ ನಂಬಿಕೆಯ ಪ್ರಾಣಿ ಅಂದರೆ ಶ್ವಾನ. ನಾಯಿ ಮತ್ತು ಮನುಷ್ಯನ ಸಂಬಂಧವನ್ನು ಅತ್ಯಂತ ಸೂಕ್ಷವಾಗಿ ಈ‌ ಸಿನಿಮಾದಲ್ಲಿ ತೋರಿಸಿದ್ದಾರೆ. ನಟ ರಕ್ಷಿತ್ ಶೆಟ್ಟಿ ಹಾಗೂ ನಿರ್ದೇಶಕ ಕಿರಣ್ ಅಧಗ ಅದ್ಭುತ ಸಿನಿಮಾ ತೆಗೆದಿದ್ದಾರೆ. ಈ ಸಿನಿಮಾವನ್ನು ಸೂಕ್ಷ್ಮವಾಗಿ ಭಾವನಾತ್ಮಕವಾಗಿ ಚಿತ್ರೀಕರಣ ಮಾಡಿದ್ದಾರೆ.

ಈ‌ ಸಿನಿಮಾದಲ್ಲಿ ಒಂದು ಮೆಸೇಜ್‌ ಇದೆ. ಪ್ರಾಣಿಗಳನ್ನು ದೂಷಿಸಬಾರದು, ಅವುಗಳನ್ನು ಅಡಾಪ್ಟ್ ಮಾಡಿಕೊಳ್ಳಬೇಕು. ನಾಯಿ ಜೊತೆ ಪಾತ್ರ ಮಾಡೋದು ಸುಲಭದ ಮಾತಲ್ಲ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಬಹಳ ಚೆನ್ನಾಗಿ ಅಭಿನಯಿಸಿದ್ದಾರೆ. ಕನ್ನಡ‌ ಚಿತ್ರರಂಗ ದೊಡ್ಡದಾಗಿ ಬೆಳೆಯುತ್ತಿದೆ. ಈ ಸಿನಿಮಾ ನೋಡಿ ಪ್ರಾಣಿಗಳ ಪ್ರೇಮಿಗಳಾಗಿ ಎಂದು ಕರೆ ಕೊಡುತ್ತೇನೆ. ಇದರ ಜೊತೆಗೆ ಬೀದಿ ನಾಯಿಗಳನ್ನು ಸರಿಯಾದ ರೀತಿ ನೋಡಿಕೊಳ್ಳೊಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಚಾರ್ಲಿ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ‌.

777 ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

777 ಚಾರ್ಲಿ ಸಿನಿಮಾ, ಬಿಡುಗಡೆ ಆದ ನಾಲ್ಕು ದಿನಕ್ಕೆ ಕರ್ನಾಟಕ ಸೇರಿದಂತೆ, ವಿಶ್ವಾದ್ಯಂತ 20 ಕೋಟಿ ರೂಪಾಯಿ ಕಲೆಕ್ಷನ್‌ ಮಾಡಿದೆ ಎನ್ನಲಾಗಿದೆ. ಸಿನಿಮಾ ನೋಡಿದ ಚಿಕ್ಕವರಿಂದ ಹಿಡಿದು, ದೊಡ್ಡವರತನ‌ಕ ಕಣ್ಣೀರು ಹಾಕಿರುವ ಘಟನೆಗಳು ಸಾಕಷ್ಟು ನಡೆದಿವೆ. ನಟ ರಕ್ಷಿತ್ ಶೆಟ್ಟಿ, ನಟಿ ಸಂಗೀತಾ ಶೃಂಗೇರಿ, ಬೇಬಿ ಶಾರ್ವರಿ, ರಾಜ್ ಬಿ. ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ತಮ್ಮ‌ ಪಾತ್ರಗಳಲ್ಲಿ ಮಿಂಚಿದ್ದಾರೆ. ನಿರ್ದೇಶಕ ಕಿರಣ್ ರಾಜ್, ಸಂಗೀತ ನಿರ್ದೇಶಕ ನೊಬಿನ್ ಪೌಲ್, ಕ್ಯಾಮರಾಮ್ಯಾನ್ ಅರವಿಂದ್ ಕಶ್ಯಪ್ ಈ ಚಿತ್ರಕ್ಕೆ ಮೂರು ಪಿಲ್ಲರ್ ಥರ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ :ಭಾವನೆಗಳ ಸುತ್ತ ನಡೆಯುವ ಕಥೆ ಬೈರಾಗಿ: ಶಿವರಾಜ್‌ ಕುಮಾರ್

ABOUT THE AUTHOR

...view details