ಕರ್ನಾಟಕ

karnataka

By

Published : Mar 3, 2023, 3:07 PM IST

ETV Bharat / entertainment

'ವೇದ' ಸಕ್ಸಸ್ ಬೆನ್ನಲ್ಲೇ ಟಾಲಿವುಡ್ ಸ್ಟಾರ್​ಗೆ ಆ್ಯಕ್ಷನ್ ಕಟ್ ಹೇಳಲು ಸಜ್ಜಾದ ನಿರ್ದೇಶಕ ಹರ್ಷ

ನಿರ್ದೇಶಕ ಎ ಹರ್ಷ ಇದೀಗ ಟಾಲಿವುಡ್ ನಟ ಗೋಪಿಚಂದ್ ಅವರ 31 ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ.

tollywood
ನಿರ್ದೇಶಕ ಹರ್ಷ

ಕನ್ನಡ ಚಿತ್ರರಂಗದ ಭಜರಂಗಿ, ವಜ್ರಕಾಯ, ವೇದ ಸೂಪರ್ ಹಿಟ್ ಸಿನಿಮಾ ಖ್ಯಾತಿಯ ಎ ಹರ್ಷ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಾಲಿವುಡ್ ಸ್ಟಾರ್ ನಟ ಗೋಪಿಚಂದ್ ಅವರ 31 ನೇ ಚಿತ್ರಕ್ಕೆ ಸ್ಯಾಂಡಲ್​ವುಡ್ ಸ್ಟಾರ್ ನಿರ್ದೇಶಕ ಎ ಹರ್ಷ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇಂದು ಗೋಪಿಚಂದ್ ಹಾಗೂ ಹರ್ಷ ಕಾಂಬಿನೇಶನ್ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದ್ದು, ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯ ಸಾಯಿ ಆರ್ಟ್ಸ್ ಪ್ರೊಡಕ್ಷನ್ ಅಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಎ ಹರ್ಷ ಹೆಣೆದ ಔಟ್ ಅಂಡ್ ಔಟ್ ಆಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಗೋಪಿಚಂದ್​ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ 14 ನೇ ಸಿನಿಮಾ ಇದಾಗಿದ್ದು, ಕೆ. ರಾಧಾಮೋಹನ್ ಅದ್ದೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈ ಬಗ್ಗೆ ನಿರ್ಮಾಪಕ ಕೆ ಕೆ ರಾಧಾಮೋಹನ್ ಮಾತನಾಡಿ, ಗೋಪಿಚಂದ್ ಹಾಗೂ ಎ ಹರ್ಷ ಜೊತೆ ಸೇರಿ ಸಿನಿಮಾ ಮಾಡುತ್ತಿರುವುದು ನಿಜಕ್ಕೂ ತುಂಬಾ ಖುಷಿಯಾಗುತ್ತಿದೆ. ಇದು ನಮ್ಮ ನಿರ್ಮಾಣ ಸಂಸ್ಥೆಯ 14 ನೇ ಸಿನಿಮಾವಾಗಿದೆ. ನಿರ್ದೇಶಕರು ಪವರ್ ಫುಲ್ ಸಬ್ಜೆಕ್ಟ್ ಇರುವ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗೋಪಿಚಂದ್ ವಿಭಿನ್ನ ಪಾತ್ರದಲ್ಲಿ ತೆರೆ ಮೇಲೆ ಕಾಣಲಿದ್ದಾರೆ. ಇದೇ ತಿಂಗಳಿನಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಆಸ್ಕರ್ ವೇದಿಕೆ ಏರಲಿರುವ ದೀಪಿಕಾ ಪಡುಕೋಣೆ: ಹೆಮ್ಮೆ ವ್ಯಕ್ತಪಡಿಸಿದ ಪತಿ ರಣ್​​ವೀರ್

ಈ ಚಿತ್ರಕ್ಕೆ ಸ್ವಾಮಿ ಜೆ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ನಿರ್ದೇಶನವಿದ್ದು, ಸದ್ಯದಲ್ಲೇ ಸಿನಿಮಾದ ತಾರಾಬಳಗ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

ಯಶಸ್ವಿ ಸಿನಿಮಾ 'ವೇದ': ಕರುನಾಡ ಚಕ್ರವರ್ತಿ ಶಿವರಾಜ್​ ಕುಮಾರ್​ ಅಭಿನಯದ ವೇದ ಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರ ಮನ ಗೆದ್ದಿದೆ. ಹೆಣ್ಣು ಮಕ್ಕಳನ್ನು ಗೌರವಿಸಬೇಕು ಎಂಬ ಸಂದೇಶವನ್ನಿಟ್ಟುಕೊಂಡು ರಿಲೀಸ್​ ಆದ ಈ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಶಿವರಾಜ್​ಕುಮಾರ್​ ಅವರ ಸ್ಟಾಲ್​ ಅಂಡ್​ ಪೇಪರ್​ ಲುಕ್​ಗೆ ಅಭಿಮಾನಿಗಳು ಕ್ಲೀನ್​ ಬೋಲ್ಡ್​ ಆಗಿದ್ದಾರೆ. ವೇದ ಸಿನಿಮಾವು ಶಿವರಾಜ್​ ಕುಮಾರ್​ ಮತ್ತು ಹರ್ಷ ಜೋಡಿಯ 4 ನೇ ಚಿತ್ರವಾಗಿದ್ದು, ಶಿವಣ್ಣನ 125 ನೇ ಸಿನಿಮಾವಾಗಿದೆ.

ವೇದ ಸಿನಿಮಾ 1960ರ ದಶಕದ ಕಥೆ. ಚಿತ್ರದಲ್ಲಿ ಶಿವರಾಜ್​ ಕುಮಾರ್​ ಜೊತೆಗೆ ಗಾನವಿ ಲಕ್ಷ್ಮಣ್​, ಶ್ವೇತಾ ಚಂಗಪ್ಪ, ಅರುಣ್​ ಸಾಗರ್​ ಮಗಳು ಅದಿತಿ ಸಾಗರ್, ಅನುಪಮಾ ಸೇರಿದಂತೆ ಅನೇಕ ಹಿಟ್​ ಕಲಾವಿದರು ಅಭಿನಯಿಸಿದ್ದಾರೆ. ಜೊತೆಗೆ ಉಮಾಶ್ರೀ, ಕುರಿ ಪ್ರತಾಪ್​ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೀತಾ ಪಿಕ್ಚರ್ಸ್​ ಬ್ಯಾನರ್​ ಅಡಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ:ರಿಯಲ್ ಸ್ಟಾರ್ ಉಪ್ಪಿ ಅಭಿನಯದ ಬಹುನಿರೀಕ್ಷಿತ ಕಬ್ಜ ಚಿತ್ರದ ಟ್ರೈಲರ್ ಬಿಡುಗಡೆ ಮುಹೂರ್ತ ಫಿಕ್ಸ್

ABOUT THE AUTHOR

...view details