ಕರ್ನಾಟಕ

karnataka

By

Published : May 4, 2022, 10:07 AM IST

ETV Bharat / entertainment

ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ

ಛಾಯಾಗ್ರಾಹಕ ಸತ್ಯ ಹೆಗಡೆ ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಕಿರು ಚಿತ್ರ ನಿರ್ಮಾಣ ಮಾಡುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

encouragement-for-new-talent-through-satya-hegde-studios
ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ

ದುನಿಯಾ ಸಿನಿಮಾ ಮೂಲಕ ಕನ್ನಡದ ಬಹು ಬೇಡಿಕೆಯ ಛಾಯಾಗ್ರಹಕರಾಗಿ ಹೊರಹೊಮ್ಮಿದ ಸತ್ಯ ಹೆಗಡೆ ಕಿರು ಚಿತ್ರಗಳನ್ನು ನಿರ್ಮಾಣ ಮಾಡುವ ಯುವ ಪ್ರತಿಭಾವಂತ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ್ದಾರೆ.

ಸಾಹಿತಿ ಜಯಂತ್ ಕಾಯ್ಕಿಣಿ ಜೊತೆ ಹೊಸ ಪ್ರತಿಭೆಗಳು

ವಿನಯ್ ಶಾಸ್ತ್ರಿ ನಿರ್ದೇಶನದಲ್ಲಿ ಮಂಜುನಾಥ್ ಹೆಗಡೆ ಹಾಗೂ ಅರಣಾ ಬಾಲರಾಜ್ ನಟಿಸಿರುವ 'ಕಾಲ' ಕಿರುಚಿತ್ರ ಮತ್ತು ಅಭಿಷೇಕ್ ಕಾಸರಗೋಡು ನಿರ್ದೇಶನದ "ನಾಟಕದ ಕಂಪನಿ" ಹಾಗೂ ಪ್ರಶಾಂತ್ ಗೌಡ ನಿರ್ದೇಶನದಲ್ಲಿ ರಮ್ಯಕೃಷ್ಣ ಮುಖ್ಯಭೂಮಿಕೆಯಲ್ಲಿ ನಟಿಸಿರುವ "ಲಾಸ್ಟ್ ಆರ್ಡರ್" ಕಿರುಚಿತ್ರಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಸಾಹಿತಿ ಜಯಂತ ಕಾಯ್ಕಿಣಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕರಾದ ಕೆ.ಮಂಜು, ಉದಯ್ ಕೆ ಮೆಹ್ತಾ, ನಿರ್ದೇಶಕ ಗಿರಿರಾಜ್ ಮುಂತಾದ ಗಣ್ಯರು ಭಾಗವಹಿಸಿದ್ದರು.

ಇದನ್ನೂ ಓದಿ:ಕನ್ನಡ ಚಿತ್ರರಂಗದ ಪ್ರತಿನಿಧಿಗಳನ್ನು ಭೇಟಿ ಮಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್

ABOUT THE AUTHOR

...view details