ಕನ್ನಡ ಚಿತ್ರರಂಗ ಅಲ್ಲದೇ ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಈಗ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದೆ. ಕೆಜಿಎಫ್ 1, ಕೆಜಿಎಫ್ 2 ಮತ್ತು ಕಾಂತಾರ ಸಿನಿಮಾ ಮೂಲಕ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿರೋ ನಿರ್ಮಾಪಕ ವಿಜಯ್ ಕಿರಂಗದೂರ್ ಈಗ ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಈ ಹಿಂದೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಸಲ್ಮಾನ್ ಖಾನ್ ಜೊತೆ ಭಜರಂಗಿ ಬಾಯಿಜಾನ್ ಸಿನಿಮಾ ಮಾಡುವ ಮೂಲಕ ಸಕ್ಸಸ್ ಕಂಡಿದ್ದರು. ಇದೀಗ ಹೊಂಬಾಳೆ ಫಿಲ್ಸ್ಮ್ ನಿರ್ಮಾಪಕ ವಿಜಯ್ ಕಿರಂಗದೂರ್ ಅವರು ಬಾಲಿವುಡ್ನ ಕಿಂಗ್ ಖಾನ್ ಜೊತೆ ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಹೌದು ಬಾಲಿವುಡ್ನಲ್ಲಿ ನಟನಾಗಿ, ನಿರ್ಮಾಪಕನಾಗಿ ಸಾಕಷ್ಟು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಶಾರುಖ್ ಖಾನ್ ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸಿನಿಮಾ ಮಾಡಿಲ್ಲ. ಕೆಜಿಎಫ್ ಸಿನಿಮಾ ಮುಂದೆ ಶಾರುಖ್ ಖಾನ್ ಅವರು 'ಝೀರೋ' ಸಿನಿಮಾ ಪೈಪೋಟಿ ಮಾಡಿತ್ತು. ಆದರೆ ಕೆಜಿಎಫ್ 1 ನಿರೀಕ್ಷೆಗೂ ಮೀರಿ ದಾಖಲೆ ಬರೆಯಿತು.
ಬಳಿಕ ಸಿನಿಮಾಗಳಿಂದ ದೂರ ಉಳಿದಿದ್ದ ಶಾರುಖ್ ಸದ್ಯ ಪಠಾಣ್, ಜವಾನ್, ಟೈಗರ್ 3, ಡುಂಕಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಹೊಂಬಾಳೆ ಫಿಲ್ಸ್ಮ್ ನಿಂದ ನಿರ್ಮಾಣವಾಗುತ್ತಿರುವ ಹೊಸ ಸಿನಿಮಾಗೆ ಶಾರುಖ್ ಅಭಿನಯಿಸಲಿದ್ದಾರೆ ಅನ್ನೋ ವಿಷಯ ಗಾಂಧಿನಗರದಿಂದ ಹಿಡಿದು ಬಾಲಿವುಡ್ವರೆಗೂ ಸೌಂಡ್ ಮಾಡುತ್ತಿದೆ.