ಕರ್ನಾಟಕ

karnataka

'ಕಾಣೆಯಾದವರ ಬಗ್ಗೆ ಪ್ರಕಟಣೆ' ಟ್ರೇಲರ್ ಬಿಡುಗಡೆ: ದುನಿಯಾ ‌ವಿಜಯ್,‌ ಡಾಲಿ ಧನಂಜಯ್ ಸಾಥ್

By

Published : Apr 20, 2022, 12:28 PM IST

ವಿಭಿನ್ನ ಕಥಾಹಂದರ ಹೊಂದಿರುವ 'ಕಾಣೆಯಾದವರ ಬಗ್ಗೆ ಪ್ರಕಟಣೆ' ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದೆ.

kaneyadavara bagge prakatane
'ಕಾಣೆಯಾದವರ ಬಗ್ಗೆ ಪ್ರಕಟಣೆ'

ವಿಭಿನ್ನ ಕಥಾಹಂದರ ಹೊಂದಿರುವ 'ಕಾಣೆಯಾದವರ ಬಗ್ಗೆ ಪ್ರಕಟಣೆ' ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳವಾರ ನಡೆಯಿತು. ದುನಿಯಾ ‌ವಿಜಯ್ ಹಾಗೂ‌ ಡಾಲಿ ಧನಂಜಯ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ದುನಿಯಾ ‌ವಿಜಯ್ ಮಾತನಾಡಿ, ನಿರ್ದೇಶಕ ಅನಿಲ್​ಗೆ ಬರವಣಿಗೆಯಲ್ಲಿ ಬಹಳ ಆಸಕ್ತಿಯಿದೆ. ಆತನ ಸಂಭಾಷಣೆಯಲ್ಲಿ ಉತ್ತಮ ಚಿತ್ರಗಳು ಬಂದಿವೆ. ನಿರ್ದೇಶಕನಾಗಿಯೂ ಆತ ಚಿರಪರಿಚಿತ. ಈಗ ತೀರ ಅಪರೂಪವೆಂಬ ಕಥಾವಸ್ತು ಆಯ್ಕೆಮಾಡಿಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದರು.

ನಟ ಡಾಲಿ ಧನಂಜಯ್ ಮಾತನಾಡಿ, ಒಬ್ಬ ನಾಯಕ ಎರಡೂವರೆ ಗಂಟೆಗಳ ಕಾಲ ಒಬ್ಬನೇ ತೆರೆಯ ಮೆಲೆ ಕಾಣಲು ಸಾಧ್ಯವಿಲ್ಲ. ನಾಯಕನಿಗೆ ಇಲ್ಲಿರುವ ಅದ್ಭುತ ಕಲಾವಿದರ ಸಹಕಾರ ಬೇಕು. ನಮ್ಮ ಚಿತ್ರದಲ್ಲಿ ರಘು ಅಣ್ಣ ಮಾಡಿರುವ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಕಲಾವಿದರ ಸಂಗಮದಲ್ಲಿ ಮೂಡಿಬಂದಿರುವ ಈ ಚಿತ್ರ ನೋಡಲು ನಾನು ಕಾತರಾನಾಗಿದ್ದೀನಿ ಎಂದು ಹೇಳಿದರು.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದುನಿಯಾ ವಿಜಯ್ ಹಾಗೂ ಡಾಲಿ ಅವರಿಗೆ ಧನ್ಯವಾದ. ಇದೊಂದು ವಿಭಿನ್ನ ಕಥಾವಸ್ತು. ರಂಗಾಯಣ ರಘು, ರವಿಶಂಕರ್, ತಬಲ ನಾಣಿ, ಚಿಕ್ಕಣ್ಣ, ತಿಲಕ್, ಆಶಿಕಾ ರಂಗನಾಥ್ ಮುಂತಾದ ಕಲಾವಿದರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನನ್ನ ಅಣ್ಣ ಜಿತೇಂದ್ರ ಮಂಜುನಾಥ್ ನಮ್ಮ ಚಿತ್ರಕ್ಕೆ ಹಣ ಹೂಡಿದ್ದಾರೆ. ಈ ಚಿತ್ರಕ್ಕೆ ನನ್ನ ಸ್ನೇಹಿತರ ಸಹಕಾರ ಅಪಾರ. ಈಗ ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಮೇನಲ್ಲಿ ಚಿತ್ರ ತೆರೆಗೆ ತರುತ್ತೇವೆ ಎಂದರು ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

ಕನ್ನಡದಲ್ಲಿ ಕಾಲಕಾಲಕ್ಕೆ ತಕ್ಕ ಹಾಗೆ ಉತ್ತಮ ಕಥಾವಸ್ತುವುಳ್ಳ ಚಿತ್ರಗಳು ಬರುತ್ತದೆ. ಕನ್ನಡಿಗ ಉತ್ತಮ ಕಥೆಯುಳ್ಳ ಚಿತ್ರಕ್ಕೆ ಜೈ ಎನ್ನುತ್ತಾನೆ. ಅನಿಲ್ ಕುಮಾರ್ ಸಹ ಉತ್ತಮ ಕಥೆಯುಳ್ಳ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರ ಗೆಲ್ಲುವ ಭರವಸೆಯಿದೆ ಎಂದು ರಂಗಾಯಣ ರಘು ವಿಶ್ವಾಸ ವ್ಯಕ್ತಪಡಿಸಿದರು.

ನಾಯಕ, ನಾಯಕಿ ಅಂತ ಇಲ್ಲದೇ ಕಥೆಯನ್ನೇ ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ "ಕಾಣೆಯಾದವರ ಬಗ್ಗೆ ಪ್ರಕಟಣೆ". ಇಂತಹ ಪ್ರಯತ್ನ ‌ಮಾಡಿರುವ ಅನಿಲ್ ಕುಮಾರ್ ಅವರಿಗೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ರವಿಶಂಕರ್ ಹೇಳಿದರು. ಉತ್ತಮ ಕಥೆ ಆಯ್ಕೆ ಮಾಡಿಕೊಂಡಿರುವ ನಿರ್ಮಾಪಕ , ನಿರ್ದೇಶಕರಿಗೆ ಅಭಿನಂದನೆ. ಕಲಾವಿದನಿಗೆ ತಾನು ಮಾಡಿದ್ದ ಪಾತ್ರಗಳಲ್ಲಿ ಕೆಲವು ಪಾತ್ರಗಳು ಮನಸ್ಸಿಗೆ ಹತ್ತಿರವಾಗುತ್ತವೆ. ಅಂತಹ ಪಾತ್ರದಲ್ಲಿ ನನಗೆ ಈ ಚಿತ್ರದ ಪಾತ್ರ ಕೂಡ ಒಂದು ಎಂದರು ತಬಲಾ ನಾಣಿ.

ಇದನ್ನೂ ಓದಿ:ವಾಚ್ ರಿಪೇರಿ ಮಾಡುತ್ತಿದ್ದ ಹುಡುಗ ಕೆಜಿಎಫ್ ಸಿನಿಮಾದ ಛಾಯಾಗ್ರಾಹಕನಾಗಿದ್ದು ಹೇಗೆ?

ಇದು ಮಾಮೂಲಿ ಚಿತ್ರಗಳಂತೆ ಅಲ್ಲ, ಚಿತ್ರಗಳಲ್ಲಿ ಅಭಿನಯಿಸುವ ವಿಲನ್​​ಗಳು ಹಾಗೂ ಕಾಮಿಡಿಯನ್ಸ್ ಗಳ ಸಮಾಗಮದಲ್ಲಿ ಮೂಡಿಬಂದಿರುವ ಚಿತ್ರವಿದು. ಈ ಚಿತ್ರದಲ್ಲಿ ಕಥೆಯೇ ನಾಯಕ. ಇಂತಹ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಚಿಕ್ಕಣ್ಣ ಮನವಿ ಮಾಡಿದರು.

ABOUT THE AUTHOR

...view details