ಕರ್ನಾಟಕ

karnataka

'ನನ್ನ ಪತಿ ಕಾಣೆಯಾಗಿದ್ದಾರೆ'.. ಮೇಘನಾ ರಾಜ್​ ನಟನೆಯ 'ತತ್ಸಮ ತದ್ಭವ' ಟೀಸರ್​ ಔಟ್​

By

Published : Jul 17, 2023, 3:01 PM IST

ಮೇಘನಾ ರಾಜ್​ ನಟನೆಯ 'ತತ್ಸಮ ತದ್ಭವ' ಸಿನಿಮಾದ ಟೀಸರ್​ ಬಿಡುಗಡೆಯಾಗಿದೆ.

tatsama tadbhava
ತತ್ಸಮ ತದ್ಭವ

ಕನ್ನಡ ಚಿತ್ರರಂಗದ ಖ್ಯಾತ ನಟಿ ಮೇಘನಾ ರಾಜ್​ ಬಹುಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ ಪತಿ, ಜನಪ್ರಿಯ ನಟ ಚಿರಂಜೀವಿ ಸರ್ಜಾ ನಿಧನದ ನಂತರ ಅವರು ಚಿತ್ರರಂಗದಿಂದ ದೂರವೇ ಉಳಿದಿದ್ದರು. ಯಾವುದೇ ಸಿನಿಮಾಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ಚಿರು ನಿಧನದ ಸಮಯದಲ್ಲಿ ಗರ್ಭಿಣಿಯಾಗಿದ್ದ ಅವರು ಬಳಿಕ ಮಗನ ಆರೈಕೆಯಲ್ಲಿ ಬ್ಯುಸಿಯಾಗಿ ಬಿಟ್ಟಿದ್ದರು. ಇದೀಗ 'ತತ್ಸಮ ತದ್ಭವ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಮ್​ ಬ್ಯಾಕ್​ ಮಾಡುತ್ತಿದ್ದಾರೆ.

ವಿಭಿನ್ನ ಕಥಾಹಂದರವುಳ್ಳ ಈ ಸಿನಿಮಾದಲ್ಲಿ ನಟ ಪ್ರಜ್ವಲ್ ದೇವರಾಜ್ ಜೊತೆ ಸ್ಕ್ರೀನ್​ ಶೇರ್ ಮಾಡಿದ್ದಾರೆ. ಸೈಲೆಂಟ್​ ಆಗಿಯೇ ಸಿನಿಮಾದ ಶೂಟಿಂಗ್​ ಕೂಡ ಮುಕ್ತಾಯಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆಯಿದೆ. ಈ ಕುತೂಹಲವನ್ನು ದ್ವಿಗುಣ ಮಾಡುವ ರೀತಿಯಲ್ಲಿ ಇಂದು ಸಿನಿಮಾದ ಟೀಸರ್​ ಮೂಡಿಬಂದಿದೆ. ಮೊದಲ ನೋಟವು ಸಸ್ಪೆನ್ಸ್​ ಥ್ರಿಲ್ಲರ್​ ಶೈಲಿಯಲ್ಲಿದ್ದು, ಮೇಘನಾ ರಾಜ್​ ನಟನೆ ಎಲ್ಲರ ಗಮನ ಸೆಳೆದಿದೆ. ಆಗಸ್ಟ್​ ತಿಂಗಳಲ್ಲಿ ಸಿನಿಮಾ ರಿಲೀಸ್​ ಆಗಲಿದೆ ಎಂದು ಟೀಸರ್​ನಲ್ಲಿ ಮಾಹಿತಿ ನೀಡಲಾಗಿದೆ.

ಟೀಸರ್​ನಲ್ಲಿ ಏನಿದೆ?: 'ತತ್ಸಮ ತದ್ಭವ' ಇದೊಂದು ಮಿಸ್ಸಿಂಗ್​ ಕೇಸ್​ನ ಕಥೆ. 'ನನ್ನ ಹೆಸರು ಆರಿಕಾ. ನನ್ನ ಪತಿ ಕಾಣೆಯಾಗಿದ್ದಾರೆ' ಎಂದು ಮೇಘನಾ ರಾಜ್​ ಪೊಲೀಸ್​ ಠಾಣೆಗೆ ಬಂದು ದೂರನ್ನು ನೀಡುತ್ತಾರೆ. ಈ ಕೇಸನ್ನು ಕೈಗೆತ್ತಿಕೊಳ್ಳುವುದು ಪ್ರಜ್ವಲ್​ ದೇವರಾಜ್​. ಅವರು ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಟೀಸರ್​ನ ಉದ್ದಕ್ಕೂ ಸಸ್ಪೆನ್ಸ್​ ಇದೆ. ಕಾಣೆಯಾದವರನ್ನು ಹುಡುಕುವ ಕಥೆಯನ್ನು ಹಾರರ್​ ರೀತಿಯಲ್ಲಿ ತೋರಿಸಲಾಗಿದೆ. ಇದರ ಜೊತೆಗೆ ಒಂದಿಷ್ಟು ಥ್ರಿಲ್ಲಿಂಗ್​ ಅಂಶ ಸೇರಿಸಲಾಗಿದೆ.

ಕೆಲವು ತಿಂಗಳ ಹಿಂದೆಯೇ ಈ ಚಿತ್ರದ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಈ ವೇಳೆ ಹೆಚ್ಚಿನ ಸ್ಯಾಂಡಲ್​ವುಡ್​ ತಾರೆಯರು ಪೋಸ್ಟರ್​ ಅನ್ನು ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಿಕೊಂಡಿದ್ದರು. ಪೋಸ್ಟರ್​ ಬಿಡುಗಡೆಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೇಘನಾ ರಾಜ್​, ಸಿನಿಮಾ ಕಮ್ ಬ್ಯಾಕ್​ ಬಗ್ಗೆ ಹೇಳಿಕೊಂಡಿದ್ದರು.

"ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ನಾನು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಸಿನಿಮಾವನ್ನು ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಬರೆದಿದ್ದು, ಜೊತೆಗೆ ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೇನೋ, ಇಲ್ಲವೊ ಗೊತ್ತಿಲ್ಲ. ಆದರೆ, ಖಂಡಿತ ಈ ಸಿನಿಮಾ ನನಗೆ ಒಳ್ಳೆಯ ಹೆಸರು ತಂದು ಕೊಡುತ್ತೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ವಿಶಾಲ್​ ಆತ್ರೇಯ ಅವರು 'ತತ್ಸಮ ತದ್ಭವ' ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡಿದ್ದಾರೆ. ಸ್ಫೂರ್ತಿ ಅನಿಲ್​ ಅವರು ಪನ್ನಗ ಭರಣ ಅವರ ಜೊತೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಒಂದು ಹಾಡಿದೆ. ಬರುವ ತಿಂಗಳಲ್ಲೇ ಸಿನಿಮಾ ತೆರೆ ಕಾಣಲಿದೆ.

ಇದನ್ನೂ ಓದಿ:Kausalya Supraja Rama: 'ಕೌಸಲ್ಯ ಸುಪ್ರಜಾ ರಾಮ' ಚಿತ್ರದ ಟ್ರೇಲರ್​ನಲ್ಲಿ‌ ನಂಬಿಕೆ, ಸಂಬಂಧಗಳ ಸಂಘರ್ಷವಿದೆ- ಕಿಚ್ಚ ಸುದೀಪ್‌

ABOUT THE AUTHOR

...view details