ಸ್ಯಾಂಡಲ್ವುಡ್ಗೆ ಹೊಸ ಪ್ರತಿಭೆಗಳಿಂದ ಕೂಡಿದ ಚಿತ್ರತಂಡವೊಂದು ವಿಭಿನ್ನ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಕರ್ಣನ್.ಎಸ್ ಎಂಬವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಸಿನಿಮಾ ಧೀರ ಭಗತ್ ರಾಯ್ ತೆರೆಗೆ ಬರಲು ಸಜ್ಜಾಗಿದೆ.
ಆ್ಯಕ್ಷನ್ ಪೊಲಿಟಿಕಲ್ ಡ್ರಾಮಾ ಆಧಾರಿತ 'ಧೀರ ಭಗತ್ ರಾಯ್' ಅಧಿಕಾರಕ್ಕಾಗಿ ನಡೆಯುವ ಹೋರಾಟ, ಪ್ರೀತಿ, ಮಮತೆಯ ಸುತ್ತ ನಡೆಯುವ ಬಾಂಧವ್ಯದ ಕಥೆಯಾಗಿದೆ. ಪ್ರತಿ ಪಾತ್ರಗಳ ಅಭಿನಯ ನೋಡುಗರ ಮನಮುಟ್ಟಲಿದೆ ಎಂದು ಚಿತ್ರತಂಡ ಹೇಳಿದೆ. ರಾಕೇಶ್ ದಳವಾಯಿ ಹೀರೋ ಆಗಿ ನಟಿಸುತ್ತಿದ್ದಾರೆ. ಸುಚರಿತ ಸಹಾಯರಾಜ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.