ವಿಜ್ಞಾನ ಮತ್ತು ಪುರಾಣ ಮಿಶ್ರಣದ ಧ್ರುವ 369 ಸಿನಿಮಾದ ಮುಹೂರ್ತ ಸಮಾರಂಭ ವಿಜಯನಗರದ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್ ಭಟ್ ಕ್ಲಾಪ್ ಮಾಡಿದರೆ, 'ಟಕ್ಕರ್' ಖ್ಯಾತಿಯ ನಟ ಮನೋಜ್ಕುಮಾರ್ ಕ್ಯಾಮರ ಆನ್ ಮಾಡಿದರು.
ಯುವ ನಿರ್ದೇಶಕ ಶಂಕರ್ನಾಗ್.ಎಸ್.ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪ್ರಥಮ ಬಾರಿ ರಾಘವೇಂದ್ರ ರಾಜ್ಕುಮಾರ್ ರಾಜ್ಯಪಾಲರಾಗಿ ಅಭಿನಯಿಸುತ್ತಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ಶುಭ ಸಂದೇಶವನ್ನು ವಿಡಿಯೋ ಮೂಲಕ ರವಾನಿಸಿದ್ದರು.
ಭೂಮಿಯಿಂದ ತುಂಬಾ ಚೆನ್ನಾಗಿ ಪರಿಪೂರ್ಣವಾಗಿ ಕಾಣಿಸುವುದು ಧ್ರುವ ನಕ್ಷತ್ರ. 369 ಸಂಖ್ಯೆ ಎಂಬುದು ಸಾರ್ವತ್ರಿಕವಾಗಿದೆ. ಅದಕ್ಕೆ ಅದರದ್ದೇ ಆಯಾಮವಿದೆ. ಮತ್ತೊಂದು ಕಡೆ ಮ್ಯಾಜಿಕ್ ನಂಬರ್ ಅಂತಲೂ ಕರೆಯಬಹುದು. ಕಥೆಯಲ್ಲಿ ಇವರೆಡು ಸೇರಿದರೆ ಏನು ಆಗುತ್ತದೆ ಎಂಬುದನ್ನು ಹೇಳಲಾಗುತ್ತಿದೆ. ಸಾಧನೆ ಮಾಡಬೇಕು ಅಂದುಕೊಂಡರೆ ಏನು ಬೇಕಾದರೂ ಮಾಡಬಹುದು. ದೂರದ ಲೋಕಕ್ಕೆ ಹೋಗಿ ಹನುಮಂತ ಹಣ್ಣು ತೆಗೆದುಕೊಂಡು ಬಂದಿದ್ದ ಅಂತಾ ಹೇಳಲಾಗಿದೆ. ಅದೇ ರೀತಿ ಚಿತ್ರವು ಫ್ಯಾಂಟಸಿ ತರಹ ಸಾಗುತ್ತದೆ.