ಕರ್ನಾಟಕ

karnataka

ETV Bharat / entertainment

10 ವರ್ಷದ ಬಳಿಕ ಅಭಿನಯಕ್ಕಿಳಿದ ರಮ್ಯಾ: 'ಇನ್ ಮ್ಯಾಲಿಂದ್ ಫುಲ್ ಗುದ್ದಾಂ ಗುದ್ದಿ' - ನಿರ್ದೇಶಕ ರೋಹಿತ್ ಪದಕಿ

ಡಾಲಿ ಧನಂಜಯ್​ ನಾಯಕನಾಗಿ, ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ನಾಯಕಿಯಾಗಿ ಅಭಿನಯಿಸುತ್ತಿರುವ 'ಉತ್ತರಕಾಂಡ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ ನೆರವೇರಿತು.

Ramya and Dali Dhananjay
ರಮ್ಯಾ ಹಾಗೂ ಡಾಲಿ ಧನಂಜಯ್​

By

Published : Nov 7, 2022, 11:23 AM IST

ಇದು ಸಿನಿಮಾ‌ ಪ್ರೇಮಿಗಳಿಗೆ ಅಚ್ಚರಿ ಹಾಗೂ ಸಿಹಿ ಸುದ್ದಿ. ಸ್ಯಾಂಡಲ್‌ವುಡ್ ಕ್ವೀನ್ ಎಂದು ಹೆಸರಾಗಿರೋ ನಟಿ ರಮ್ಯ ‘ಉತ್ತರಕಾಂಡ’ ಚಿತ್ರದ ಮೂಲಕ ನಾಯಕಿಯಾಗಿ ಬೆಳ್ಳಿಪರದೆಗೆ ಹಿಂತಿರುಗುತ್ತಿದ್ದಾರೆ. ಡಾಲಿ ಧನಂಜಯ್ ಅಭಿನಯಿಸುತ್ತಿರೋ ಉತ್ತರಕಾಂಡ ಚಿತ್ರಕ್ಕೆ ಮೋಹಕ ತಾರೆ ನಾಯಕಿಯಾಗಿದ್ದಾರೆ‌. ಎಂಟು ವರ್ಷಗಳ ಬಳಿಕ ತಮಗೆ ಅತ್ಯಂತ ಆಪ್ತವಾದ ಕಥೆ ಹಾಗು ಪಾತ್ರ ‘ಉತ್ತರಕಾಂಡ’ ಕೊಟ್ಟಿರುವ ಕಾರಣ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡು ಸ್ಯಾಂಡಲ್‌ವುಡ್ ಕ್ವೀನ್ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ.

ಚಿತ್ರದ ಮುಹೂರ್ತ ನಿನ್ನೆ ಬೆಂಗಳೂರಿನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮುಖ್ಯ ಪಾತ್ರಧಾರಿಗಳಾದ ಧನಂಜಯ ಹಾಗು ರಮ್ಯಾ ಪೂಜೆಯಲ್ಲಿ ಭಾಗವಹಿಸಿದ್ದರು.

ಉತ್ತರಕಾಂಡ ಸಿನಿಮಾ ಮುಹೂರ್ತದ ವೇಳೆ ರಮ್ಯಾ

ಉತ್ತರಕಾಂಡದ ಬಗ್ಗೆ ರಮ್ಯಾ ಮಾತನಾಡಿ, "ರತ್ನನ್ ಪ್ರಪಂಚ ಚಿತ್ರಕ್ಕೆ ನಾಯಕಿಯ ಪಾತ್ರವನ್ನು ನನಗೆ ಕೇಳಿದಾಗ ಕಾರಣಾಂತರಗಳಿಂದ ಒಪ್ಪಿಕೊಳ್ಳಲಾಗಿರಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನೆಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ಸಿನೆಮಾ ತಂಡದ ಜೊತೆ ಕೈ ಜೋಡಿಸಿ ಬೆಳ್ಳಿಪರದೆಗೆ ಹಿಂತಿರುಗುತ್ತಿರುವುದು ಸಂತೋಷ ತಂದಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಹಾಗು ಬಾಂಧವ್ಯ ಒಂದು ಒಳ್ಳೇ ಜಾಗದಲ್ಲಿದ್ದೀನಿ ಅನ್ನೋ ಭಾವನೆ ಕೊಟ್ಟಿದೆ. ಇಂತಹ ದೈತ್ಯ ಪ್ರತಿಭೆಗಳ ಜೊತೆ ಶೂಟಿಂಗ್ ಶುರು ಮಾಡೋದಕ್ಕೆ ಕಾಯ್ತ ಇದ್ದೀನಿ" ಎಂದರು.

ಉತ್ತರಕಾಂಡ ಸಿನಿಮಾ ಮುಹೂರ್ತ

ವೈವಿಧ್ಯಮಯ ಪಾತ್ರಗಳಲ್ಲಿ ನಾಯಕ ನಟನಾಗಿ ಮಿಂಚುತ್ತಿರುವ ಧನಂಜಯ ಅವರ ವೃತ್ತಿಯಲ್ಲೇ ಅತಿ ದೊಡ್ಡ ಸಿನೆಮಾ ‘ಉತ್ತರಕಾಂಡ’. ಅತ್ಯಂತ ಗಟ್ಟಿಯಾದ, ಕಷ್ಟವಾದ ಪಾತ್ರ ವಹಿಸಿಕೊಂಡಿರುವುದರ ಬಗ್ಗೆ ನಿರ್ದೇಶಕರು ಹಲವು ವಿಚಾರಗಳನ್ನು ಧನಂಜಯ್ ಹಂಚಿಕೊಂಡರು. ನಮ್ಮ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರ ಜೊತೆ ಸ್ಕ್ರೀನ್ ಹಂಚಿಕೊಳ್ಳುತ್ತಿರೋ ಈ ಸಿನಿಮಾದ ಮೂಲಕ ಕನಸು ನನಸು ಆಗುತ್ತಿದೆ. ಇದು ಮತ್ತೊಂದು ಖುಷಿಯ ವಿಚಾರ. ಪ್ರತಿ ಬಾರಿ ನನ್ನ ಪರವಾಗಿ ನಿಂತು ಯುದ್ಧ ಮಾಡುವ ಮಾಧ್ಯಮ ಮಿತ್ರರು, ನನ್ನ ಮೇಲೆ ನಂಬಿಕೆಯಿಟ್ಟು ನನ್ನ ಶಕ್ತಿಯಾಗಿ ನಿಂತಿರುವ ಕನ್ನಡ ಕುಲಕೋಟಿಗೆ ನನ್ನ ಹೃದಯಪೂರ್ವಕ ನಮನಗಳು. ಹೀಗೆ ಜೊತೆಗಿರಿ, ತಪ್ಪಾದಾಗ ತಿದ್ದಿ, ಗೆಲುವಾಗುವಂತೆ ಹರಸಿ, ಎಂದರು.

ಒಂದೇ ದಿಕ್ಕಿನಲ್ಲಿ ಆಲೋಚಿಸುವವರು ಒಟ್ಟಿಗೆ ಸೇರಿ, ನಿಸ್ವಾರ್ಥವಾಗಿ ಸಿನಿಮಾಕ್ಕಾಗಿ, ಒಬ್ಬರು ಇನ್ನೊಬ್ಬರಿಗಾಗಿ contribute ಮಾಡಿದಾಗ ಅದ್ಭುತಗಳು ಸಂಭವಿಸುತ್ತವೆ ಎಂದು ನಾನು ನಂಬಿದ್ದೇನೆ. ಅದೆ ರೀತಿ ಆಗಿದ್ದು, ಮೈಲಿಗಲ್ಲಾಗಿದ್ದು 'ರತ್ನನ್ ಪ್ರಪಂಚ'. ರೋಹಿತ್ ಪದಕಿಯಂತ ನಿರ್ದೇಶಕ ಘಟನ ಜೊತೆ ಎರಡನೇ ಪ್ರಯತ್ನ, ಕಾರ್ತಿಕ್ ಹಾಗು ಯೋಗಿಯಂತ ನಿರ್ಮಾಪಕರ ಜೊತೆ ಸತತವಾಗಿ ಮೂರನೇ ಪ್ರಯತ್ನ, ಇನ್ನೊಂದು ಮೈಲಿಗಲ್ಲಿನ ಕಡೆ ಮತ್ತೊಂದು ದಿಟ್ಟ ಹೆಜ್ಜೆ “ಉತ್ತರಕಾಂಡ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಡಾಲಿ.

ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ಈ ಸಿನೆಮಾ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನು ಬಿಂಬಿಸುತ್ತದೆ. ಸರಿ ತಪ್ಪುಗಳ ಸಿದ್ದಾಂತ, ಅಹಂಕಾರಗಳ ಗುದ್ದಾಟ. ಈ ಸಿನೆಮಾ ಒಂದು ಸೆಲೆಬ್ರೇಶನ್. ಉತ್ತರಕರ್ನಾಟಕದ ಅದ್ಭುತ ಬದುಕಿನ ನಡುವೆ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿ. ಚಿತ್ರ ಸಂಪೂರ್ಣ ಉತ್ತರಕರ್ನಾಟಕದ ಸೊಗಡಲ್ಲಿ, ಭಾಷೆಯಲ್ಲಿ ಇರುತ್ತದೆ. ಹಾಗೂ ಅಲ್ಲಿಯೇ ಚಿತ್ರೀಕರಣವಾಗಲಿದೆ ಎಂದು ಕೂಡ ಹಂಚಿಕೊಂಡಿದ್ದಾರೆ.

'ಇನ್ ಮ್ಯಾಲಿಂದ ಫುಲ್ ಗುದ್ದಾಂಗುದ್ದಿ’ ಎಂದು ಅಡಿ-ಶೀರ್ಷಿಕೆ ಹೊಂದಿರುವ ‘ಉತ್ತರಕಾಂಡ’ ದೊಡ್ಡ ಮಟ್ಟದ ಮಾಸ್ ಮನರಂಜನೆ ನೀಡುವ ಸಿನೆಮಾ ಆಗಲಿದೆ ಎಂದು ನಿರ್ಮಾಪಕರು ಹೇಳಿದ್ದಾರೆ. ಮುಂದಿನ ವರ್ಷದಲ್ಲಿ ಸೆಟ್ಟೇರುತ್ತಿರುವ ಚಿತ್ರಗಳಲ್ಲಿ ಅತಿ ದೊಡ್ಡ ತಾರಾಗಣ ಹಾಗೂ ಬಜೆಟ್ ಹೊಂದಿರುವ ಚಿತ್ರ ಇದು ಎಂದು ಹೇಳಲಾಗುತ್ತಿದೆ.

ತಾರಾಗಣದಲ್ಲಿ ಬೇರೆ ಯಾರಾದರೂ ಇದ್ದಾರಾ? ಎಂದು ಕೇಳಿದಾಗ, ಮತ್ತಷ್ಟು ಸ್ಟಾರ್‌ಗಳ ಹೆಸರು ಇಷ್ಟರಲ್ಲೇ ಅನೌನ್ಸ್ ಮಾಡ್ತೀವಿ, ತಾರೆಯರ ಪಟ್ಟಿ ಈ ತಂಡದ ಜೊತೆ ಇಷ್ಟರಲ್ಲೇ ಕೈ ಜೋಡಿಸಲಿದೆ ಎಂಬ ಮಾತು ಹೊರಬಿತ್ತು. ಹಾಗೆಯೇ, ಈ ಸಿನೆಮಾ ನಮ್ಮ ಸಂಸ್ಥೆಗೆ ಒಂದು ಸಂಭ್ರಮ ಎಂದು ಕಾರ್ತಿಕ್ ಮತ್ತು ಯೋಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಜಯ್ ಕಿರಗಂದೂರು ಅರ್ಪಿಸುತ್ತಿರುವ, ಕೆ.ಆರ್.ಜಿ ಸಂಸ್ಥೆ ನಿರ್ಮಾಣದಲ್ಲಿ ಧನಂಜಯ ಅವರ ಜೊತೆ ಕೈಜೋಡಿಸಿರುವ ಮೂರನೇ ಚಿತ್ರ ಇದು. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅವರ ಕಮ್‌ಬ್ಯಾಕ್ ಚಿತ್ರ ಇದಾಗ್ತಿರೋದು ಕೂಡ ನಮ್ಮ ಖುಷಿಯನ್ನು ದುಪ್ಪಟ್ಟು ಮಾಡಿದೆ. ಇನ್ನು ರೋಹಿತ್ ಪದಕಿ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಸಂಬಂಧ ಉನ್ನತ ಮಟ್ಟದಲ್ಲಿದೆ. 'ರತ್ನನ್ ಪ್ರಪಂಚ' ಒಂದು ಮೈಲಿಗಲ್ಲಾದ್ರೆ, ‘ಉತ್ತರಕಾಂಡ’ ಎಂದೂ ಹೇಳಿರದ ಅನುಭವ ಎಂದು ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ತಮ್ಮ ಸಂತೋಷ ವ್ಯಕ್ತಪಡಿಸಿದರು.

ಈ ಚಿತ್ರದ ಶೂಟಿಂಗ್ ಜನವರಿ ತಿಂಗಳಿಂದ ಪ್ರಾರಂಭವಾಗಲಿದ್ದು, ಅರವಿಂದ ಕಶ್ಯಪ್ ಕ್ಯಾಮರಾ, ಚರಣ್ ರಾಜ್ ಸಂಗೀತ ಸಂಯೋಜನೆ ಇರಲಿದೆ. ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲೆ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ:ಹಾಸ್ಟೆಲ್ ಹುಡುಗರ ಪ್ರತಿಭಟನೆಗೆ ಮಣಿದ ನಟಿ ರಮ್ಯಾ... ನಟನೆ ಕೊನೆಗೂ ಕಮ್‌ ಬ್ಯಾಕ್​!

ABOUT THE AUTHOR

...view details