ಕರ್ನಾಟಕ

karnataka

ದಿಗಂತ್​ಗೆ ಸುದೀಪ್​ ಸಪೋರ್ಟ್: 'ಎಡಗೈಯೇ ಅಪಘಾತಕ್ಕೆ ಕಾರಣ' ಟೀಸರ್ ರಿಲೀಸ್

By ETV Bharat Karnataka Team

Published : Dec 28, 2023, 1:58 PM IST

ಸ್ಯಾಂಡಲ್​ವುಡ್​ ನಟ ದಿಗಂತ್ 40ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮ ಮುಂದಿನ ಬಹುನಿರೀಕ್ಷಿತ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರ ತಂಡದಿಂದ ಸ್ಪೆಷಲ್​​ ಗಿಫ್ಟ್​​ ಸ್ವೀಕರಿಸಿದ್ದಾರೆ.

Edagaiye Apghatakke Karana teaser
'ಎಡಗೈಯೇ ಅಪಘಾತಕ್ಕೆ ಕಾರಣ' ಟೀಸರ್

ಕನ್ನಡ ಚಿತ್ರರಂಗದಲ್ಲಿ ಕಂಟೆಂಟ್ ಓರಿಯೆಂಟೆಡ್ ಸಿನಿಮಾಗಳು ಮೂಡಿ ಬರುತ್ತಿವೆ. ಒಂದೊಳ್ಳೆ ಕಥಾಹಂದರ ಮತ್ತು ಫನ್​ ಎಲಿಮೆಂಟ್ಸ್ ಜೊತೆ ಬಂದ ಅನೇಕ ಸಿನಿಮಾಗಳು ಕನ್ನಡ ಸಿನಿಪ್ರಿಯರನ್ನು ರಂಜಿಸುವಲ್ಲಿ ಯಶಸ್ಸು ಕಂಡಿವೆ. ಈ ಸಾಲಿಗೆ ದೂದ್ ಪೇಡಾ ಖ್ಯಾತಿಯ ದಿಗಂತ್ ಅಭಿನಯದ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರ ಕೂಡ ಸೇರುವ ವಿಶ್ವಾಸದಲ್ಲಿ ಚಿತ್ರತಂಡವಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರಕ್ಕೀಗ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ.

ಹೌದು, ಸಿನಿಮಾ, ನಟನೆ, ನಿರ್ದೇಶನ ಹಾಗೂ ಕ್ರಿಕೆಟ್ ಎಂದು ಪೈಲ್ವಾನ್ ತಮ್ಮ ಗೆಳೆಯರ ಹೊಸ ಪ್ರಯತ್ನಗಳಿಗೆ ಸಪೋರ್ಟ್ ಮಾಡುತ್ತ ಬಂದಿದ್ದಾರೆ. ಇದೀಗ‌ ಕಿಚ್ವನ ಆಪ್ತ ಗೆಳೆಯರ ಬಳಗದಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ದಿಗಂತ್ ಸಿನಿಮಾದ ಟೀಸರ್ ಅನಾವರಣಗೊಂಡಿದೆ. ಟೀಸರ್ ರಿಲೀಸ್​ ಮಾಡುವ ಮೂಲಕ ಗೆಳೆಯನ ಚಿತ್ರಕ್ಕೆ ಕಿಚ್ಚ ಸಾಥ್ ನೀಡಿದ್ದಾರೆ. ಸದ್ಯ ರಿವೀಲ್ ಆಗಿರುವ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರದ ಟೀಸರ್ ಸಸ್ಪೆನ್ಸ್ ಜೊತೆಗೆ ಥ್ರಿಲ್ಲರ್ ಅಂಶಗಳಿಂದ ಕೂಡಿದೆ.

ವಿಶೇಷ ಅಂದ್ರೆ ದಿಗಂತ್ ಜನ್ಮದಿನ ವಿಶೇಷವಾಗಿ ಚಿತ್ರತಂಡ ಟೀಸರ್ ಬಿಡುಗಡೆ ಮಾಡುವ‌ ಮೂಲಕ ಬರ್ತ್​​​ಡೇ ಗಿಫ್ಟ್ ಕೊಟ್ಟಿದೆ. ಸ್ಯಾಂಡಲ್​ವುಡ್​ನಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿರುವ ದಿಗಂತ್ 40ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೂ ಸೇರಿದಂತೆ ಚಿತ್ರರಂಗದವರು ಶುಭಾಶಯ ಕೋರಿದ್ದಾರೆ.

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು.

ಇದನ್ನೂ ಓದಿ:'chef ಚಿದಂಬರ'ದ ಅನು ಪಾತ್ರದಲ್ಲಿ ರೆಚೆಲ್ ಡೇವಿಡ್; ಶೀಘ್ರ ಬಿಡುಗಡೆಗೆ ಸಿದ್ಧತೆ

ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ನವ ನಟಿ ಧನು ಹರ್ಷ ಅಭಿನಯಿಸುತ್ತಿದ್ದಾರೆ. ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೋಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ. ಸದ್ಯ ಟೀಸರ್​ನಿಂದ ಗಮನ ಸೆಳೆಯುತ್ತಿರೋ ಎಡಗೈಯೇ ಅಪಘಾತಕ್ಕೆ ಕಾರಣ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ಇದನ್ನೂ ಓದಿ:ಸಸ್ಪೆನ್ಸ್ ಥ್ರಿಲ್ಲರ್ ಕಥೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್

ABOUT THE AUTHOR

...view details