ಕರ್ನಾಟಕ

karnataka

ETV Bharat / entertainment

ಪತ್ನಿಗೆ ವಿಚ್ಛೇದನ ನೀಡುವ ವದಂತಿ ಬಗ್ಗೆ ನಟ ಶ್ರೀಕಾಂತ್ ಹೇಳಿದ್ದಿಷ್ಟು! - ಖ್ಯಾತ ನಟ ಶ್ರೀಕಾಂತ್

ಪತ್ನಿ ಊಹಾಗೆ ವಿಚ್ಛೇದನ ನೀಡಲಾಗುತ್ತಿದೆ ಎಂಬ ವದಂತಿಗಳಿಗೆ ಖ್ಯಾತ ನಟ ಶ್ರೀಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ.

telugu actor srikanth divorce rumours viral
telugu actor srikanth divorce rumours viral

By

Published : Nov 22, 2022, 7:18 PM IST

ಹೈದರಾಬಾದ್​:ತೆಲುಗು ಮತ್ತು ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ ಶ್ರೀಕಾಂತ್ ತಮ್ಮ ವೈವಾಹಿಕ ಬದುಕಲ್ಲಿ ಎದ್ದಿರುವ ವಿಚ್ಛೇದನ ಎಂಬ ಬಿರುಗಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪತ್ನಿ ಊಹಾಗೆ ವಿಚ್ಛೇದನ ನೀಡಲಾಗುತ್ತಿದೆ ಎಂಬ ವದಂತಿಯನ್ನು ಬಲವಾಗಿ ಅಲ್ಲಗಳೆದಿರುವ ಅವರು ಇದೆಲ್ಲ ಸುಳ್ಳು ಸುದ್ದಿ ಎಂದಿದ್ದಾರೆ.

ಊಹಾಗೆ ವಿಚ್ಛೇದನ ನೀಡುತ್ತಿದ್ದೇನೆ ಎಂದು ಹಲವು ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿ ಪ್ರಚಾರ ಮಾಡುತ್ತಿವೆ. ಕೆಲವು ವೆಬ್‌ಸೈಟ್‌ಗಳಲ್ಲಿ ಬರುತ್ತಿರುವ ಫೇಕ್ ನ್ಯೂಸ್ ನೋಡಿ ಪತ್ನಿ ಊಹಾ ಚಿಂತೆ ಮಾಡತೊಡಗಿದ್ದಾರೆ. ಈ ಬಗ್ಗೆ ಸಂಬಂಧಿಕರಿಂದ ಕರೆಗಳು ಸಹ ಬರುತ್ತಿವೆ. ಇದೆಲ್ಲ ಸುಳ್ಳು ಸುದ್ದಿ. ನಂಬದಿರಿ ಎಂದು ಹೇಳಿದ್ದೇವೆ.

ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ವೆಬ್‌ಸೈಟ್‌ ಮತ್ತು ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುತ್ತೇನೆ. ಆಧಾರ ರಹಿತ ವದಂತಿಗಳನ್ನು ಹಬ್ಬಿಸುತ್ತಿರುವ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶ್ರೀಕಾಂತ್ ಒತ್ತಾಯ ಮಾಡಿದ್ದಾರೆ.

1997ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀಕಾಂತ್ ಮತ್ತು ಊಹಾ ದಂಪತಿಗೆ ಪುತ್ರರಾದ ರೋಷನ್, ರೋಹನ್ ಮತ್ತು ಪುತ್ರಿ ವೇದಾ ಎಂಬ ಮೂವರು ಮಕ್ಕಳಿದ್ದಾರೆ. ಇನ್ನೂ ಪತ್ನಿ ಊಹಾ ಕೂಡ ನಟಿಯಾಗಿದ್ದು, ಸಾಕಷ್ಟು ಸೌತ್ ಚಿತ್ರಗಳಲ್ಲಿ ನಟಿಸಿದ್ದಾರೆ.

ತೆಲುಗು ಸಿನಿಮಾ ರಂಗದಲ್ಲಿ ತನ್ನದೇ ಸ್ಟಾರ್ ಡಮ್ ಹೊಂದಿರುವ ಶ್ರೀಕಾಂತ್, ಸಾಕಷ್ಟು ಕನ್ನಡ ಚಿತ್ರದಲ್ಲಿಯೂ ನಟಿಸಿದ್ದಾರೆ. ಮೂಲತಃ ಗಂಗಾವತಿಯವರಾದ ಶ್ರೀಕಾಂತ್, ಹೆಂಡತಿ ಹೇಳಿದರೆ ಕೇಳಬೇಕು ಎಂಬ ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದ ಬಳಿಕ ಯುಗಾದಿ, ದಿ ವಿಲನ್, ಪುನೀತ್​ ರಾಜ್​ಕುಮಾರ್​ ನಟನೆಯ ಜೇಮ್ಸ್​ ಚಿತ್ರದಲ್ಲಿಯೂ ಅವರು ನಟಿಸಿದ್ದಾರೆ.

ಇದನ್ನೂ ಓದಿ:ಹುಲಿಗಳಿಗೆ ಕಲ್ಲೆಸೆತ: ರವೀನಾ ಟಂಡನ್ ಟ್ವೀಟ್ ಆಧರಿಸಿ ತನಿಖೆ


ABOUT THE AUTHOR

...view details