ಕರ್ನಾಟಕ

karnataka

ETV Bharat / international

ಇಂಡೋ-ಪಾಕ್​​​​​ ಗಡಿಯಲ್ಲಿ ಶಾಂತಿ ಕಾಪಾಡಿ: ವಿಶ್ವಸಂಸ್ಥೆ - ಕಾಶ್ಮೀರದ ವಿಶೇಷ ಸ್ಥಾನಮಾನ

ಉಭಯ ದೇಶಗಳ ಗಡಿ ಭಾಗದಲ್ಲಿ ತಲ್ಲಣದ ವಾತಾವರಣ ನಿರ್ಮಾಣವಾಗಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಎರಡೂ ದೇಶಗಳು ಸಂಯಮದಿಂದ ಮುಂದುವರೆಯಬೇಕು ಎಂದು ಡುಜರಿಕ್ ಮನವಿ ಮಾಡಿದ್ದಾರೆ.

ವಿಶ್ವಸಂಸ್ಥೆ

By

Published : Aug 6, 2019, 8:33 AM IST

ವಾಷಿಂಗ್ಟನ್​:ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಸದ್ಯ ತಲ್ಲಣದ ವಾತಾವರಣ ನಿರ್ಮಾಣವಾಗಿದ್ದು, ಈ ಸಂಬಂಧ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟಾರೆಸ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ ಎಂದು ವಕ್ತಾರ ಸ್ಟೀಫನ್​​ ಡುಜರಿಕ್ ಹೇಳಿದ್ದಾರೆ.

ಉಭಯ ದೇಶಗಳ ಗಡಿ ಭಾಗದಲ್ಲಿ ತಲ್ಲಣದ ವಾತಾವರಣ ನಿರ್ಮಾಣವಾಗಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಎರಡೂ ದೇಶಗಳು ಸಂಯಮದಿಂದ ಮುಂದುವರೆಯಬೇಕು ಎಂದು ಡುಜರಿಕ್ ಮನವಿ ಮಾಡಿದ್ದಾರೆ.

'ಕಾಶ್ಮೀರ ವಿಚಾರದಲ್ಲಿ ಅಮೆರಿಕ ಮಧ್ಯಸ್ಥಿಕೆ ಅಗತ್ಯ': ಭಾರತದ ನಡೆ ಖಂಡಿಸಿ ಅಫ್ರಿದಿ ಟ್ವೀಟ್

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ರದ್ದು ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸುವ ವೇಳೆ ಭಾರತ ಹಾಗೂ ಪಾಕಿಸ್ತಾನ ನಾಯಕರು ಶಾಂತಿ ಕಾಪಾಡಬೇಕು ಎಂದಿದ್ದಾರೆ.

ಉಭಯ ದೇಶಗಳು ಪರಿಸ್ಥಿತಿಯನ್ನು ವಿಕೋಪಕ್ಕೆ ತೆಗೆದುಕೊಂಡು ಹೋಗಬಾರದು ಮತ್ತು ಸಂಯಮ ಕಾಯ್ದುಕೊಳ್ಳಬೇಕು ಎಂದು ಡುಜರಿಕ್ ಹೇಳಿದ್ದಾರೆ.

ABOUT THE AUTHOR

...view details