ನ್ಯೂಯಾರ್ಕ್(ಅಮೆರಿಕ): ನಾಗರಿಕರ ವಿರುದ್ಧದ ದಾಳಿಗಳು ಸ್ವೀಕಾರಾರ್ಹವಲ್ಲ ಮತ್ತು ಅಂತಹ ಅಪರಾಧಗಳನ್ನು ಮಾಡುವವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ವಿಶ್ವಸಂಸ್ಥೆ ಮುಖ್ಯ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಾಬೂಲ್ನಲ್ಲಿ ಗುರುದ್ವಾರದ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ.
ಕಾಬೂಲ್ನಲ್ಲಿ ಸಿಖ್ ಸಮುದಾಯದ ಮೇಲೆ ನಡೆದ ದಾಳಿಯನ್ನು ಪ್ರಧಾನ ಕಾರ್ಯದರ್ಶಿಗಳು ಖಂಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಅವರು ಸಹಾನುಭೂತಿ ವ್ಯಕ್ತಪಡಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲೆಂದು ಬಯಸುತ್ತಾರೆ ಎಂದು ಪ್ರಧಾನ ಕಾರ್ಯದರ್ಶಿ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.