ವಾಷಿಂಗ್ಟನ್(ಯುಎಸ್): ಕ್ಯಾಲಿಫೋರ್ನಿಯಾದ ಡೇವಿಸ್ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ ಮಾಡಿದ ಕೃತ್ಯವನ್ನು ಶ್ವೇತಭವನ ಖಂಡಿಸಿದೆ.
ಗಾಂಧಿಯವರ ಸ್ಮಾರಕವನ್ನು ಅಪವಿತ್ರಗೊಳಿಸಿದ ಘಟನೆ ಬಗ್ಗೆ ನಮಗೆ ಖಂಡಿತವಾಗಿಯೂ ಕಾಳಜಿ ಇದೆ. ಕೃತ್ಯವನ್ನು ನಾವು ಖಂಡಿಸುತ್ತೇವೆ ಹಾಗೂ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಎಂದು ಶ್ವೇತಭವನದಲ್ಲಿ ನಡೆದ ಸಮಾವೇಶದಲ್ಲಿ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ.
ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ನಲ್ಲಿರುವ ಪ್ರತಿಮೆಯ ಪಾದ, ತಲೆಯ ಭಾಗ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮುರಿದುಹೋಗಿತ್ತು.