ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭಾರತೀಯ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಪಾಕಿಸ್ತಾನ ಭಾರತೀಯ ಹೈಕಮಿಷನ್ನ ಹಿರಿಯ ರಾಜತಾಂತ್ರಿಕ ಅಧಿಕಾರಿಗೆ ಸಮನ್ಸ್ ಜಾರಿ ಮಾಡಿದೆ.
ನಿಕಿಯಾಲ್ ಸೆಕ್ಟರ್ನಲ್ಲಿ ಮಂಗಳವಾರ ಭಾರತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಮೂವರು ಪಾಕಿಸ್ತಾನಿ ನಾಗರಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಪಾಕ್ ವಿದೇಶಾಂಗ ಕಚೇರಿ ಹೇಳಿಕೊಂಡಿದೆ.