ಕರ್ನಾಟಕ

karnataka

ETV Bharat / jagte-raho

ಬಾವಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ರಾಜಸ್ಥಾನದ ಬಾರ್ಮರ್ ಜಿಲ್ಲೆಯ ರೋಹಿಲಾಡಾ ಎಂಬ ಗ್ರಾಮದಲ್ಲಿ ಬಾವಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.

By

Published : Jan 8, 2021, 12:17 PM IST

Big accident in barmer
ಬಾವಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಬಾರ್ಮರ್​ (ರಾಜಸ್ಥಾನ): ಬಾವಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.

ಬಾವಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ನಾಲ್ವರು ಕಾರ್ಮಿಕರು ಬಾರ್ಮರ್ ಜಿಲ್ಲೆಯ ರೋಹಿಲಾಡಾ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಕಾಮಗಾರಿಯಲ್ಲಿ ತೊಡಗಿದ್ದರು. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಜಿಲ್ಲಾಡಳಿತ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ ಇಬ್ಬರನ್ನು ಮಾತ್ರ ರಕ್ಷಿಸಲಾಗಿದ್ದು, ಇನ್ನಿಬ್ಬರು ಬಾವಿಯೊಳಗೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ- ರಸ್ತೆ ಹಿಮಾವೃತ: ಬಾಣಂತಿ-ಮಗುವನ್ನು 3.5 ಕಿಮೀ ಸ್ಟ್ರೆಚರ್​ನಲ್ಲಿ ಹೊತ್ತು ಸಾಗಿದ ಯೋಧರು

ಅಸ್ವಸ್ಥಗೊಂಡಿರುವ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಿಂದಾಗಿ ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ.

ABOUT THE AUTHOR

...view details