ಕರ್ನಾಟಕ

karnataka

ಚಿತ್ರದುರ್ಗದಲ್ಲಿ ಕಾರು-ಬೈಕ್​ ನಡುವೆ ಡಿಕ್ಕಿ: ಇಬ್ಬರ ದುರ್ಮರಣ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಕೆರೆ ಬಳಿ ನಡೆದಿದೆ.

By

Published : Jan 22, 2020, 9:44 AM IST

Published : Jan 22, 2020, 9:44 AM IST

KN_CTD_01_22_ACCIDENT_AV_7204336
ಕಾರ್ ಮತ್ತು ಬೈಕ್ ನಡುವೆ ಡಿಕ್ಕಿ, ಚಿತ್ರದುರ್ಗದಲ್ಲಿ ಇಬ್ಬರ ದುರ್ಮರಣ

ಚಿತ್ರದುರ್ಗ:ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಕೆರೆ ಬಳಿ ನಡೆದಿದೆ.

ಬೈಕಿನಲ್ಲಿದ್ದ ಇಬ್ಬರನ್ನು ಹೊಳಲ್ಕೆರೆ ತಾಲೂಕಿನ ನೇರಳಕಟ್ಟೆ ಗ್ರಾಮದ ಉಮೇಶ (32) ಮತ್ತು ಗುಂಡೇರಿ ಗ್ರಾಮದ ಶ್ರೀನಿವಾಸ (30) ಎಂದು ಗುರುತಿಸಲಾಗಿದೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details