ಕರ್ನಾಟಕ

karnataka

ETV Bharat / jagte-raho

ಜಾರ್ಖಂಡ್​: ಅಕ್ರಮ ಗಣಿಗಾರಿಕೆ ವೇಳೆ ನಾಲ್ವರ ದುರ್ಮರಣ - mica mining

mica mining
ಕೊಡರ್ಮಾದ ಅಭ್ರಕದ ಗಣಿಯಲ್ಲಿ ಅವಘಡ

By

Published : Jan 22, 2021, 11:55 AM IST

Updated : Jan 22, 2021, 12:32 PM IST

11:49 January 22

ಜಾರ್ಖಂಡ್​ನ ಕೊಡರ್ಮಾ ಜಿಲ್ಲೆಯ ಅಭ್ರಕದ ಗಣಿಯಲ್ಲಿ ಕಾರ್ಮಿಕರ ಮೇಲೆ ಮಣ್ಣು ಕುಸಿದು ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಕೊಡರ್ಮಾದ ಅಭ್ರಕದ ಗಣಿಯಲ್ಲಿ ಅವಘಡ

ಕೊಡೆರ್ಮಾ (ಜಾರ್ಖಂಡ್): ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಜಿಲೆಟಿನ್ ಸ್ಫೋಟದ ಬೆನ್ನಲ್ಲೇ ಇದೀಗ ಜಾರ್ಖಂಡ್​ನಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಮತ್ತೊಂದು ಅವಘಡ ಸಂಭವಿಸಿದೆ.  

ಜಾರ್ಖಂಡ್​ನ ಕೊಡರ್ಮಾ ಜಿಲ್ಲೆಯ ಫುಲ್ವೇರಿಯಾ ಪ್ರದೇಶದಲ್ಲಿರುವ ಅಭ್ರಕದ ಗಣಿಯಲ್ಲಿ ಕಾರ್ಮಿಕರ ಮೇಲೆ ಮಣ್ಣು ಕುಸಿದು ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆಯೇ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಮೃತದೇಹಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.  

ಇದನ್ನೂ ಓದಿ:ಶಿವಮೊಗ್ಗ ಜಿಲೆಟಿನ್​ ಸ್ಫೋಟ ಪ್ರಕರಣ: ಶಿವಮೊಗ್ಗಕ್ಕೆ ಆಗಮಿಸಿದ ಬಾಂಬ್​ ಸ್ಕ್ವಾಡ್ ತಂಡಗಳು!

ಮಣ್ಣಿನಡಿ ಇನ್ನೂ ಕೆಲವರು ಸಿಲಿಕಿದ್ದು, ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. 

ನಿನ್ನೆ ರಾತ್ರಿ ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಫೋಟಿಸಿ ಎಂಟು ಕಾರ್ಮಿಕರು ಬಲಿಯಾಗಿದ್ದರು.  

Last Updated : Jan 22, 2021, 12:32 PM IST

ABOUT THE AUTHOR

...view details