ಹುಬ್ಬಳ್ಳಿ: ರಾತ್ರಿ ವೇಳೆ ಸಂಚರಿಸುವ ರೈಲುಗಳಲ್ಲಿ ಚಹಾ ಮಾರುವ ವೇಷದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಮಂಟೂರ ರಸ್ತೆ ಜುಬಿಲಿ ಚರ್ಚ್ ಬಳಿಯ ನಿವಾಸಿ ಯೋಹಾನಕುಮಾರ ಪ್ರಾಂಚೀಸ್ ಕುಂರ್ದತಿ (20) ಹಾಗೂ ಪ್ರೇಮಕುಮಾರ ಅಲಿಯಾಸ್ ಚಿಂಟು ಏಸು ಸೂರ್ಯಪಲ್ಲಿ (25) ಬಂಧಿತರು. ಅವರಿಂದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮೊಬೈಲ್ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.