ಕರ್ನಾಟಕ

karnataka

By

Published : Feb 4, 2020, 11:48 PM IST

ETV Bharat / jagte-raho

ಪಾದಚಾರಿಗೆ ಡಿಕ್ಕಿ ಹೊಡೆದು ಬೈಕ್​ ಸವಾರ ಪರಾರಿ

ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bike rider collides with pedestrian
ಪಾದಚಾರಿಗೆ ಬೈಕ್ ಡಿಕ್ಕಿ

ಹುಬ್ಬಳ್ಳಿ: ಪಾದಚಾರಿಗೆ ಡಿಕ್ಕಿ ಹೊಡೆದು ಬೈಕ್​ ಸವಾರನೋರ್ವ ಪರಾರಿಯಾಗಿದ್ದು, ಘಟನೆಯಲ್ಲಿ ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಉಣಕಲ್ ಜನನಿ ಕಾರ್ ಡೆಕೋರ್​ ಎದುರು ಈ ಘಟನೆ ನಡೆದಿದೆ.

ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ತಲೆಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಧಾರವಾಡ ಮೂಲದ ಪವನ್​​ ನಂದ್ಯಾಳ ಎಂದು ಗುರುತಿಸಲಾಗಿದೆ.

ಪಾದಚಾರಿಗೆ ಬೈಕ್ ಡಿಕ್ಕಿ

ಪವನ್​ ಉಣಕಲದಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿಯಾಗಲು ಬಂದಿದ್ದರು ಎಂದು ತಿಳಿದು ಬಂದಿದೆ. ಅಪಘಾತವಾಗುತ್ತಿದ್ದಂತೆ ಘಟನಾ ಸ್ಥಳದಿಂದ ಬೈಕ್ ಸವಾರ ಪರಾರಿಯಾಗಿದ್ದು, ಸ್ಥಳದ್ದಲ್ಲಿದ್ದ ಕಾರ್ ಡೆಕೋರ್ ಮಾಲೀಕ ವಿಜಯ ಗಾಯಾಳುವನ್ನು ಉಪಚರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಇಲ್ಲಿಯವರೆಗೂ ಯಾವುದೇ ದೂರು ದಾಖಲಾಗಿಲ್ಲ.

ABOUT THE AUTHOR

...view details