ಕರ್ನಾಟಕ

karnataka

ETV Bharat / jagte-raho

ಬಹುಮಹಡಿ ಕಟ್ಟಡದಿಂದ ಬಿದ್ದು ಅನುಮಾನಸ್ಪದವಾಗಿ ವ್ಯಕ್ತಿ ಸಾವು, ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ - ನಿನ್ನೆ ಸಂಜೆ 5.30 ರೊಳಗೆ ಬಿದ್ದು ಸಾವನ್ನಪ್ಪಿದ್ದು

29 ಅಂತಸ್ತಿನ ಬಹುಮಹಡಿ ಕಟ್ಟಡದಿಂದ ಯುವಕನೋರ್ವ ಬಿದ್ದು ಮೃತಪಟ್ಟಿರುವ ಘಟನೆ ನಗರದ ಕೋಣನಕುಂಟೆ ಯಲ್ಲಿ ನಡೆದಿದೆ.

Kn_bng_02_23_fall_death_ka10020
ಬಹುಮಹಡಿ ಕಟ್ಟಡದಿಂದ ಬಿದ್ದು ಅನುಮಾನಸ್ಪದವಾಗಿ ವ್ಯಕ್ತಿ ಸಾವು, ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

By

Published : Jan 23, 2020, 3:43 PM IST

ಬೆಂಗಳೂರು:29 ಅಂತಸ್ತಿನ ಬಹುಮಹಡಿ ಕಟ್ಟಡದಿಂದ ಯುವಕನೋರ್ವ ಬಿದ್ದು ಮೃತಪಟ್ಟಿರುವ ಘಟನೆ ನಗರದಕೋಣನಕುಂಟೆ ಯಲ್ಲಿ ನಡೆದಿದೆ.

ಬಹುಮಹಡಿ ಕಟ್ಟಡದಿಂದ ಬಿದ್ದು ಅನುಮಾನಸ್ಪದವಾಗಿ ವ್ಯಕ್ತಿ ಸಾವು, ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಬೆಂಗಳೂರು ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಎಂಟು ವರ್ಷದ ಹಿಂದೆ ಬಂದಿದ್ದ ಸುನಿಲ್ ಗ್ಲಾಸ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆ 5.30ರ ಸುಮಾರಿಗೆ ಕಟ್ಟಡದಿಂದ ಬಿದ್ದು ಸಾವಿಗೀಡಾಗಿದ್ದು, ಇಂದು ತಡವಾಗಿ ಗೊತ್ತಾಗಿದೆ. ಸಂಬಂಧಿಕರುಇಂದು ಬಹು ಮಹಡಿ ಕಟ್ಟಡದ ಮುಂದೆ ಶವವನ್ನಿಟ್ಟು ನ್ಯಾಯ ಸಿಗಬೇಕೆಂದು ಹೋರಾಟ ನಡೆಸುತ್ತಿದ್ದಾರೆ.ಸಾವಿಗೆ ನಿಖರ ಕಾರಣಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details