ಬಾಗಲಕೋಟೆ : ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ವಿಠ್ಠಲ ಮನಗೂಳಿ ಕೊಲೆ ಆರೋಪಿ. 22 ವರ್ಷದ ಪತ್ನಿ ರಂಜಿತಾ, 50 ವರ್ಷದ ರೇಣವ್ವ ಕೊಲೆಗೀಡಾದವರು. ಆಸ್ತಿ ಹಾಗೂ ವರದಕ್ಷಿಣೆ ನೀಡದ ಹಿನ್ನೆಲೆ ಕೊಲೆ ಮಾಡಿದ್ದಾಗಿ ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಗುಳೇದಗುಡ್ಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.