ಕರ್ನೂಲ್(ಆಂಧ್ರಪ್ರದೇಶ):ಮದುವೆ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್, ನಿಂತ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮದುವೆ ಗಂಡು ಗಾಯಗೊಂಡ ಘಟನೆ ನಡೆದಿದೆ.
ಆಂಧ್ರಪ್ರದೇಶದ ಕರ್ನೂಲ್ ಬಳಿಯ ಉಲಿಂದಕೊಂಡ ಹೈವೇಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.
ಕರ್ನೂಲ್(ಆಂಧ್ರಪ್ರದೇಶ):ಮದುವೆ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್, ನಿಂತ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮದುವೆ ಗಂಡು ಗಾಯಗೊಂಡ ಘಟನೆ ನಡೆದಿದೆ.
ಆಂಧ್ರಪ್ರದೇಶದ ಕರ್ನೂಲ್ ಬಳಿಯ ಉಲಿಂದಕೊಂಡ ಹೈವೇಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಎಸ್ಆರ್ಎಸ್ ಟ್ರಾವೆಲ್ಸ್ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಡ್ರೈವರ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಸ್ ಜಖಂಗೊಂಡಿದೆ.
ಲಾರಿಯಲ್ಲಿದ್ದ ಪೈಪ್ಗಳು ಬಸ್ನೊಳಗೆ ನುಗ್ಗಿದ್ದು, ಗಾಯಾಳುಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಬಸ್ನಲ್ಲಿ ಮಧುಮಗ ಸೇರಿದಂತೆ 15 ಜನರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇದೆ.
ಅಪಘಾತದಲ್ಲಿ ಮದುವೆ ಗಂಡು ಸೇರಿದಂತೆ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.