ಶಿವಮೊಗ್ಗ: ನಗರದಲ್ಲಿ ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳನ್ನು ಘಟನೆ ನಡೆದ 8 ಗಂಟೆಯ ಒಳಗೆ ಬಂಧಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಿನ್ನೆ ರಾತ್ರಿ ಎನ್.ಟಿ. ರಸ್ತೆಯ ಸುಂದರ ಆಶ್ರಯ ಬಾರ್ ಒಳಗೆ ನಡೆದ ಸಣ್ಣ ಗಲಾಟೆಯಲ್ಲಿ ಜೀವನ್ ಹಾಗೂ ಕೇಶವ್ ಎಂಬುವರಿಗೆ ಚಾಕುವಿಂದ ಇರಿಯಲಾಗಿತ್ತು. ಇದರಲ್ಲಿ ಜೀವನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ಕೇಶವ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ಸಮೀರ್ ಅಲಿಯಾಸ್ ಅಪ್ಪು(21), ಆದಿಲ್ ಪಾಷಾ(27), ಪ್ರತಾಪ್ ಅಲಿಯಾಸ್ ಅಣ್ಣಾ (24) ಹಾಗೂ ಸಕ್ಲೈನ್ ಮುಸ್ತಾಕ್ (21) ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಐದು ಜನ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಬಲೆ ಬಿಸಿದ್ದಾರೆ.