ಕರ್ನಾಟಕ

karnataka

ಕೆರೆಯಲ್ಲಿ ಕಾಲು ತೊಳೆಯುವಾಗ ಜಾರಿ ಬಿದ್ದು ವಿದ್ಯಾರ್ಥಿ ಸಾವು

ಸ್ನೇಹಿತರೊಂದಿಗೆ ಬಹಿರ್ದೆಸೆಗೆ ಹೋಗಿ ಕೆರೆಯಲ್ಲಿ ಕೈ ಕಾಲು ತೊಳೆದುಕೊಳ್ಳುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿ ತೇಜನ ತಂದೆ ಹೊನ್ನೂರಸ್ವಾಮಿ ನೀಡಿದ ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By

Published : Jan 20, 2021, 7:30 PM IST

Published : Jan 20, 2021, 7:30 PM IST

student-deaths-fall-on-foot-in-lake-hosapete
ಕೆರೆಯಲ್ಲಿ ಕಾಲು ತೊಳೆಯುವಾಗ ಜಾರಿ ಬಿದ್ದು ವಿದ್ಯಾರ್ಥಿ ಸಾವು..

ಹೊಸಪೇಟೆ: ಶಾಲೆಗೆ ಹೋಗಿದ್ದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಕಾಲು ತೊಳೆಯುವಾಗ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ಜಿಗೇನಹಳ್ಳಿ ಕೆರೆಯಲ್ಲಿ ನಡೆದಿದೆ.

ಓದಿ: ಬೆಳಗಾವಿ: ಆಸ್ತಿಗಾಗಿ ತಮ್ಮನ ಮಗನನ್ನೇ ಹತ್ಯೆ ಮಾಡಿದ ಪಾಪಿ ದೊಡ್ಡಪ್ಪ!

ಜಿಗೇನಹಳ್ಳಿಯ ತೇಜ (9) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಬಹಿರ್ದೆಸೆಗೆ ಹೋಗಿ ಕೆರೆಯಲ್ಲಿ ಕೈ ಕಾಲು ತೊಳೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿ ತೇಜನ ತಂದೆ ಹೊನ್ನೂರಸ್ವಾಮಿ ನೀಡಿದ ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details