ಕರ್ನಾಟಕ

karnataka

ಅತ್ತಿಗೆ ಜೊತೆ ಅನೈತಿಕ ಸಂಬಂಧ... ತಮ್ಮನನ್ನೇ ಹತ್ಯೆಗೈದು ಪೊಲೀಸರಿಗೆ ಶರಣಾದ ಅಣ್ಣ!

By

Published : Feb 14, 2019, 1:10 PM IST

ಅತ್ತಿಗೆ ಜೊತೆ ಅನೈತಿಕ ಸಂಬಂಧ ಹಿನ್ನೆಲೆ ಅಣ್ಣನಿಂದಲೇ ತಮ್ಮ ಕೊಲೇಗೀಡಾದ ಘಟನೆ ಸಿಂದಗಿ ತಾಲೂಕಿನ ಕಕ್ಕಳಮೆಲಿ ಗ್ರಾಮದಲ್ಲಿ ನಡೆದಿದೆ.

ಕೊಲೆಗೀಡಾದ ಸಹೋದರ

ವಿಜಯಪುರ: ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆ ಮೈದುನ ಬರ್ಬರವಾಗಿ ಕೊಲೆಗೀಡಾಗಿರುವ ಘಟನೆ ಸಿಂದಗಿ ತಾಲೂಕಿನ ಕಕ್ಕಳಮೆಲಿ ಗ್ರಾಮದಲ್ಲಿ ನಡೆದಿದೆ.

ಸಿದ್ದರಾಮ ಬಳಬಟ್ಟಿ (35) ಕೊಲೆಗೀಡಾದ ವ್ಯಕ್ತಿ. ಆತನ ಅಣ್ಣ ಮುದಕಪ್ಪ ಬಳಬಟ್ಟಿ ಕೊಲೆ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ಶರಣಾಗಿರುವ ಆರೋಪಿ. ಕೊಲೆಗೀಡಾದ ಸಿದ್ದರಾಮ ಕಳೆದ ಮೂರು ವರ್ಷಗಳಿಂದ ತನ್ನ ಸಹೋದರ ಮುದಕಪ್ಪನ ಪತ್ನಿ ಜೊತೆಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಎನ್ನಲಾಗ್ತಿದೆ. ಮುದುಕಪ್ಪ ಕೊಡಲಿಯಿಂದ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಬಳಿಕ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:

ABOUT THE AUTHOR

...view details