ಜೈಸಲ್ಮೇರ್ (ರಾಜಸ್ಥಾನ): ಭಾರತೀಯ ಸೇನೆ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಹೊಸ ತಲೆಮಾರಿನ ಆಕಾಶ್ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.
ಆತ್ಮನಿರ್ಭರ ಭಾರತದ ಮಹತ್ತರ ಮೈಲಿಗಲ್ಲು, ದೇಶೀ ನಿರ್ಮಿತ ಕ್ಷಿಪಣಿ ಇದಾಗಿದ್ದು, ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಾನ್ ಪ್ರದೇಶದಲ್ಲಿ ಮಂಗಳವಾರ ಪರೀಕ್ಷೆ ನಡೆಸಲಾಗಿದೆ. ಈ ಕ್ಷಿಪಣಿಯನ್ನು ಭಾರತೀಯ ವಾಯುಪಡೆ (ಐಎಎಫ್) ಬಳಸಲಿದೆ. 40 ಕಿ.ಮೀ ದೂರದಲ್ಲೇ ದೊಡ್ಡ ವೈಮಾನಿಕ ದಾಳಿಯನ್ನು ತಡೆಯುವ ಸಾಮರ್ಥ್ಯದೊಂದಿಗೆ ಇದನ್ನು ನಿರ್ಮಿಸಲಾಗಿದೆ.