ನವದೆಹಲಿ: ಸೂರ್ಯನ ವಾತಾವರಣ ಅಧ್ಯಯನ ಮಾಡುವ ಇಸ್ರೋದ ಆದಿತ್ಯ-ಎಲ್1 ಮಿಷನ್ ಈ ವರ್ಷ ಉಡಾವಣೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಾಜಿ ಮುಖ್ಯಸ್ಥ ಎ.ಎಸ್. ಕಿರಣ್ ಕುಮಾರ್ ಹೇಳಿದ್ದಾರೆ.
ಮಂಗಳ ಗ್ರಹದ ಅಧ್ಯಯನಕ್ಕಾಗಿ ಉಡಾವಣೆ ಮಾಡಿದ್ದ ಮಾರ್ಸ್ ಆರ್ಬಿಟರ್ ಮಿಷನ್ 7 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಟ್ರೋಸ್ಯಾಟ್ ಮಿಷನ್ ಭಾರತವು ಕಕ್ಷೆಗೆ ಹಾರಿಸಿದ ಮೊದಲ ಖಗೋಳ ವೀಕ್ಷಣಾಲಯವಾಗಿದೆ. ಇದು ಅನೇಕ ರಾಷ್ಟ್ರೀಯ ಸಂಸ್ಥೆಗಳ ನಡುವಣ ದೊಡ್ಡ ಸಹಯೋಗವಾಗಿದ್ದು, ಖಗೋಳ ಸಂಶೋಧನೆ ಮಾಡಲು ಅಧಿಕ ಡೇಟಾಗಳನ್ನು ಒದಗಿಸುವ ಮೂಲಕ ಹೆಚ್ಚಿನ ಅಧ್ಯಯನಕ್ಕೆ ಸಹಕಾರಿಯಾಗಿದೆ ಎಂದು ಕಿರಣ್ ಕುಮಾರ್ ಹೇಳಿದ್ದಾರೆ.
ಚಂದ್ರಯಾನ -2ರ ಆರ್ಬಿಟರ್ ಆರೋಗ್ಯಕರವಾಗಿದ್ದು, ಅದರಲ್ಲಿನ ಎಲ್ಲಾ ಪೇಲೋಡ್ಗಳು ಸುವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿವೆ. ಬಾಹ್ಯಾಕಾಶ ನೌಕೆ ಇನ್ನೂ ಹಲವು ವರ್ಷಗಳವರೆಗೆ ಕಾರ್ಯನಿರ್ವಹಿಸುತ್ತಿದೆ ಎಂದು ಇಂಡೋ-ಯುಎಸ್ ಕಾರ್ಯಾಗಾರದಲ್ಲಿ ಭಾಗವಹಿಸಿ ಕಿರಣ್ ಕುಮಾರ್ ಮಾತನಾಡಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ