ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸಾವಿನ ಪ್ರಕರಣದ ಜೊತೆಗೆ ಅಕ್ರಮ ಹಣಕಾಸಿನ ವ್ಯವಹಾರ ವಿಚಾರ ತಳುಕು ಹಾಕಿಕೊಳ್ಳುತ್ತಿದ್ದಂತೆ ಬಿಹಾರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಸುಶಾಂತ್ ತಂದೆ ಕೆ.ಕೆ.ಸಿಂಗ್ ದೂರಿನ ಮೇರೆಗೆ ಇಂದು ಮುಂಬೈಗೆ ಆಗಮಿಸಿದ್ದ ಬಿಹಾರ ಪೊಲೀಸರು ನಿರ್ದೇಶಕ ರೂಮಿ ಜೆಫ್ರಿ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ಇದೇ ವೇಳೆ ಬಾಂದ್ರಾ ಪೊಲೀಸ್ ಠಾಣೆಗೂ ಭೇಟಿ ನೀಡಿದ್ದ ತನಿಖಾಧಿಕಾರಿಗಳು ಮಾಹಿತಿ ಪಡೆದಿದ್ದಾರೆ.