ಕರ್ನಾಟಕ

karnataka

ETV Bharat / sitara

ಸುಶಾಂತ್​ ಪ್ರಕರಣ: ಸಲ್ಮಾನ್, ಕರಣ್ ಜೋಹರ್ ಸೇರಿ ಬಾಲಿವುಡ್‌ ದಿಗ್ಗಜರ ವಿರುದ್ಧ ದೂರು

ಬಾಲಿವುಡ್ ನಟ ಸುಶಾಂತ್​ ಸಿಂಗ್​ ರಜಪೂತ್ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​ ನಟ ಸಲ್ಮಾನ್ ಖಾನ್, ನಿರ್ಮಾಪಕ ಕರಣ್ ಜೋಹರ್ ಸೇರಿದಂತೆ 8 ಮಂದಿಯ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

By

Published : Jun 17, 2020, 5:26 PM IST

complaint letter filed against 8 including salman karan in sushant suicide case
ನಟ ಸುಶಾಂತ್​ ಸಿಂಗ್​ ರಾಜಪೂತ್ ಸಾವು ಪ್ರಕರಣ

ಮುಜಾಫರ್‌ಪುರ (ಬಿಹಾರ): ಸುಶಾಂತ್​ ಸಿಂಗ್ ಸಾವು ಹಿನ್ನೆಲೆಯಲ್ಲಿ ಬಾಲಿವುಡ್ ದಿಗ್ಗಜರಾದ ಕರಣ್ ಜೋಹರ್, ಆದಿತ್ಯ ಚೋಪ್ರಾ, ಸಾಜಿದ್ ನಾಡಿಯಾಡ್ವಾಲಾ, ಸಲ್ಮಾನ್ ಖಾನ್, ಸಂಜಯ್ ಲೀಲಾ ಬನ್ಸಾಲಿ, ಭೂಷಣ್ ಕುಮಾರ್, ಏಕ್ತಾ ಕಪೂರ್ ಮತ್ತು ನಿರ್ಮಾಪಕ-ನಿರ್ದೇಶಕ ದಿನೇಶ್ ವಿಜನ್ ಸೇರಿದಂತೆ ಹಿಂದಿ ಚಿತ್ರಲೋಕದ 8 ಮಂದಿ ವಿರುದ್ಧ ವಕೀಲ ಸುಧೀರ್ ಕುಮಾರ್ ಓಜಾ ಎಂಬುವರು ದೂರು ದಾಖಲಿಸಿದ್ದಾರೆ.

ದೂರು ಪ್ರತಿ

ಆತ್ಮಹತ್ಯೆಗೆ ಪ್ರಚೋದನೆ, ಪಿತೂರಿ ಸೇರಿದಂತೆ ವಿವಿಧ ಪ್ರಕರಣಗಳ ಅಡಿಯಲ್ಲಿ ಸ್ಥಳೀಯ ವಕೀಲ ಸುಧೀರ್ ಕುಮಾರ್ ಓಜಾ ಈ ದೂರು ದಾಖಲಿಸಿದ್ದಾರೆ. ನಟ ಸುಶಾಂತ್​ ಸಿಂಗ್​ ಅವರ ಆತ್ಮಹತ್ಯೆಯ ಹಿಂದೆ ಅನೇಕ ಬಾಲಿವುಡ್ ನಟರು ಮತ್ತು ನಿರ್ಮಾಪಕರ ಪಾತ್ರ ಇರುವ ಬಗ್ಗೆ ಅವರ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೂರು ಪ್ರತಿ

ಸುಶಾಂತ್​ ಸಿಂಗ್ ಅವರಿಂದ ಹಲವು ಸಿನಿಮಾಗಳನ್ನು ಕಿತ್ತುಕೊಳ್ಳುವ ಮೂಲಕ ಅವರನ್ನು ಅವಕಾಶವಂಚಿತರನ್ನಾಗಿ ಮಾಡಲಾಗಿತ್ತು. ಇದೇ ಕೊರಗು ಅವರನ್ನು ಸಾವಿನ ಹಾದಿಗೆ ಪ್ರೇರೇಪಿಸಿದೆ. ಹಾಗಾಗಿ ಪರೋಕ್ಷವಾಗಿ ಇವರ ಸಾವಿನ ಹಿಂದೆ ಸೂಚಿಸಿದ ವ್ಯಕ್ತಿಗಳ ಕೈವಾಡವಿದೆ ಎಂದು ಆರೋಪಿಸಿ ಪ್ರಕರಣ ದಾಖಲಿಸುತ್ತಿರುವುದಾಗಿ ಸುಧೀರ್ ಕುಮಾರ್ ಓಜಾ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ಈಟಿವಿ ಭಾರತದ ಜೊತೆ ಮಾತನಾಡುತ್ತಿರುವ ಸುಧೀರ್ ಕುಮಾರ್ ಓಜಾ

ABOUT THE AUTHOR

...view details