ಕರ್ನಾಟಕ

karnataka

ETV Bharat / sitara

ಚೈ-ಸ್ಯಾಮ್ ವಿಚ್ಛೇದನಕ್ಕೆ 'ಡಿವೋರ್ಸ್ ಎಕ್ಸ್​ಪರ್ಟ್' ಬಾಲಿವುಡ್​ ಸೂಪರ್​​ಸ್ಟಾರ್ ಕಾರಣ : ನಟಿ ಕಂಗನಾ

ಟಾಲಿವುಡ್ ಸ್ಟಾರ್ ದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನಕ್ಕೆ "ಡಿವೋರ್ಸ್​ ಎಕ್ಸ್​ಪರ್ಟ್​, ಬಾಲಿವುಡ್​ ಸೂಪರ್​​ಸ್ಟಾರ್​ (ಅಮಿರ್​ ಖಾನ್​) ಕಾರಣ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್​ ಜರಿದಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಕುರಿತು ಎರಡು ಸ್ಟೋರಿಗಳನ್ನು ಕಂಗನಾ ಪೋಸ್ಟ್​ ಮಾಡಿದ್ದಾರೆ..

By

Published : Oct 3, 2021, 3:16 PM IST

Kangana dragsಟಾಲಿವುಡ್ ಸ್ಟಾರ್ ದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನ
Kangana draಟಾಲಿವುಡ್ ಸ್ಟಾರ್ ದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನgs

ಟಾಲಿವುಡ್ ಸ್ಟಾರ್ ದಂಪತಿ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನದ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್, ಇದಕ್ಕೆಲ್ಲಾ ಡಿವೋರ್ಸ್ ಎಕ್ಸ್​ಪರ್ಟ್ ಅಮಿರ್ ಖಾನ್ ಕಾರಣ ಎಂದು ಆರೋಪಿಸಿದ್ದಾರೆ.

ಇನ್​ಸ್ಟಾಗ್ರಾಂ​ನಲ್ಲಿ ಈ ಕುರಿತು ಎರಡು ಸ್ಟೋರಿಗಳನ್ನು ಕಂಗನಾ ಪೋಸ್ಟ್​ ಮಾಡಿದ್ದಾರೆ. ಒಂದು ಸ್ಟೋರಿಯಲ್ಲಿ ಪುರುಷರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಮತ್ತೊಂದು ಪೋಸ್ಟ್​ನಲ್ಲಿ ನಾಗಚೈತನ್ಯ-ಸಮಂತಾ ದಂಪತಿ ಬೇರೆ ಆಗಲು ಅಮಿರ್​ ಖಾನ್​ ಕಾರಣ ಎಂದು ದೂರಿದ್ದಾರೆ.

ಕಂಗನಾ ಇನ್​ಸ್ಟಾಗ್ರಾಂ ಸ್ಟೋರಿ

ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕಂಗನಾ, ವಿಚ್ಛೇದನ ನಡೆದ ಸಮಯದಲ್ಲಿ ತಪ್ಪು ಯಾವಾಗಲೂ ಪುರುಷನದ್ದೇ ಆಗಿರುತ್ತದೆ. ನಾನು ಹೀಗೆ ಹೇಳಿದರೆ ಗೊಡ್ಡು ಸಂಪ್ರದಾಯದಂತೆ ಅಥವಾ ಪೂರ್ವ ನಿರ್ಧರಿತವಾಗಿ ಪೂರ್ವಾಗ್ರಹಪೀಡಿತವಾಗಿ ಮಾತನಾಡುತ್ತಿದ್ದೇನೆ ಎಂದು ಅನಿಸಬಹುದು. ಇದು ವಿಚಿತ್ರ ಎನಿಸಬಹುದು. ಆದರೆ, ಇದು ದೇವರು ಪುರುಷ ಮತ್ತು ಮಹಿಳೆಯರನ್ನು ಸೃಷ್ಟಿಸಿದ ರೀತಿ.

ಪುರುಷ ಬೇಟೆಗಾರ ಮತ್ತು ಅವಳು ಪೋಷಕಿ. ಮಹಿಳೆಯರನ್ನು ಬಟ್ಟೆಯಂತೆ ಬದಲಾಯಿಸುವ ಮತ್ತು ನಂತರ ಅವರು ಉತ್ತಮ ಸ್ನೇಹಿತರೆಂದು ಹೇಳಿಕೊಳ್ಳುವ ವ್ಯಕ್ತಿ ಮೇಲೆ ದಯೆ ತೋರಿಸುವುದನ್ನು ನಿಲ್ಲಿಸಿ. ವಿಚ್ಛೇದನ ವಿಷಯದಲ್ಲಿ ನೂರರಲ್ಲಿ ಒಬ್ಬ ಮಹಿಳೆಯ ತಪ್ಪು ಇರಬಹುದು. ಆದರೆ, ಬಹುತೇಕ ಸಂದರ್ಭಗಳಲ್ಲಿ ತಪ್ಪು ಪುರುಷರದ್ದೇ ಆಗಿರುತ್ತದೆ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ಇನ್​ಸ್ಟಾಗ್ರಾಂ ಸ್ಟೋರಿ

ದಕ್ಷಿಣ ಭಾರತದ ಈ ನಟ ಪತ್ನಿಗೆ ಏಕಾಏಕಿ ವಿಚ್ಛೇದನ ನೀಡಿದ್ದಾರೆ. 10 ವರ್ಷ ಒಟ್ಟಿಗೆ ಇದ್ದ ಇವರು ನಾಲ್ಕು ವರ್ಷದ ಹಿಂದೆ ಮದುವೆ ಆಗಿದ್ದರು. ಈ ನಟ ಇತ್ತೀಚೆಗೆ ಡಿವೋರ್ಸ್​ ಎಕ್ಸ್​ಪರ್ಟ್​, ಬಾಲಿವುಡ್​ ಸೂಪರ್​​ಸ್ಟಾರ್​ ಭೇಟಿಯಾಗಿದ್ದರು. ಎಲ್ಲವೂ ಸರಿಯಾಗಿಯೇ ನಡೆಯುತ್ತಿತ್ತು.

ಆದರೆ, ನಂತರ ಒಮ್ಮೆಲೆ ಬದಲಾಯಿತು. ಆತ ಹಲವು ಮಹಿಳೆಯರು ಮತ್ತು ಮಕ್ಕಳ ಜೀವನವನ್ನು ಹಾಳು ಮಾಡಿದವ, ಅಂಥವನ ಮಾರ್ಗದರ್ಶನದಲ್ಲಿ ಈ ನಟ ಇದ್ದಾನೆ ಎಂದ ಮೇಲೆ ವಿಚ್ಛೇದನ ಎಲ್ಲ ಸುಗಮವಾಗಿ ಸಾಗಿತು. ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದು ನಿಮಗೆ ಗೊತ್ತಾಗಿರುತ್ತದೆ ಎಂದು ಕಂಗನಾ ಪೋಸ್ಟ್​ ಮಾಡಿದ್ದಾರೆ.

ಸಮಂತಾ ಮತ್ತು ನಾಗಚೈತನ್ಯ ನಿನ್ನೆ ವಿಚ್ಛೇದನ ಪ್ರಕಟಿಸುವ ಮೂಲಕ ತಮ್ಮ 4 ವರ್ಷದ ದಾಂಪತ್ಯ ಜೀವನಕ್ಕೆ ಕೊನೆ ಹಾಡಿದ್ದಾರೆ. ಇವರು 2017ರ ಅಕ್ಟೋಬರ್ 7ರಂದು ವಿವಾಹವಾಗಿದ್ದರು. ಇನ್ನು, ನಾಗಚೈತನ್ಯ ಅವರು ಅಮಿರ್ ಖಾನ್ ಅವರ 'ಲಾಲ್ ಸಿಂಗ್ ಚಡ್ಡಾ' ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:ಬೇರೆಯಾಗುವುದಾಗಿ ಘೋಷಿಸಿದ ಸಮಂತಾ-ನಾಗ ಚೈತನ್ಯ.. ದಾಂಪತ್ಯ ಮುರಿದುಬಿದ್ದಿರುವುದು ಅಧಿಕೃತ..

ABOUT THE AUTHOR

...view details