ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಕಳೆದ ವರ್ಷವೇ ಒಂದು ಮಾತನ್ನು ಸ್ಪಷ್ಟಪಡಿಸಿದ್ದರು. ಅದು, ‘ಎಲ್ಲಕ್ಕಿಂತ ದೊಡ್ಡದು ಜೀವ. ಜೀವ ಇದ್ದರೆ ಜೀವನ ಮಾಡಿಕೊಳ್ಳಬಹುದು. ಹಾಗಾಗಿ, ಮೊದಲು ಜೀವ ಉಳಿಸಿಕೊಳ್ಳುವುದು ಮೊದಲ ಆದ್ಯತೆ ಆಗಿರುವುದರಿಂದ, ಯಾವುದೇ ಕಾರಣಕ್ಕೂ ತಮ್ಮ ಮಗಳನ್ನು ಚಿತ್ರೀಕರಣಕ್ಕೆ ಕಳುಹಿಸುವುದಿಲ್ಲ ಎಂದು ಹೇಳಿದ್ದರು. ಕೊರೊನಾ ಕಡಿಮೆಯಾಗಿ, ಲಾಕ್ಡೌನ್ ಮುಗಿದ ಮೇಲೆ ಮುಂದೆ ನೋಡೋಣ ಎಂದು ಹೇಳಿದ್ದರು.
ಅಪ್ಪನ ಮಾತಿಗೆ ಕಟ್ಟುಬಿದ್ದಿದ್ದ ನಟಿ ಶ್ರದ್ಧಾ ಕಪೂರ್ ಸಹ ಕಳೆದ ಒಂದೂವರೆ ವರ್ಷಗಳಿಂದ ಚಿತ್ರೀಕರಣಕ್ಕೆ ಹೋಗಿರಲಿಲ್ಲ ಮತ್ತು ಯಾವುದೇ ಹೊಸ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಈಗ ಕೋವಿಡ್ ಹಾವಳಿ ಕೊಂಚ ಕಡಿಮೆಯಾಗುತ್ತಿರುವುದರಿಂದ, ಶಕ್ತಿ ಕಪೂರ್ ತಮ್ಮ ಮಗಳಿಗೆ ಚಿತ್ರೀಕರಣಕ್ಕೆ ಹೋಗುವುದಕ್ಕೆ ಅನುಮತಿ ಕೊಟ್ಟಿದ್ದಾರೆ. ಅದಕ್ಕೆ ಸರಿಯಾಗಿ ಶ್ರದ್ಧಾ ಸಹ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ.