ಕರ್ನಾಟಕ

karnataka

By

Published : Dec 19, 2021, 4:59 PM IST

ETV Bharat / sitara

'ಡವ್ ಮಾಸ್ಟರ್'ನ ನೋಡಲು ಬಂದ ಶಕೀಲಾ..

ತುಂಬಾ ದಿನಗಳ ನಂತರ ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಹಿಂದೆ ನಟಿಸಿರುವ ಚಿತ್ರಗಳಿಗಿಂತ ಭಿನ್ನ ಪಾತ್ರ ಎನ್ನಬಹುದು ಎನ್ನುತ್ತಾರೆ ನಟಿ ಶಕೀಲಾ..

Dove Master Cinema team
ಡವ್ ಮಾಸ್ಟರ್ ಚಿತ್ರ ತಂಡ

ಕೆಲವರು ತಮ್ಮ ಮಕ್ಕಳಷ್ಟೇ ಪ್ರೀತಿ, ವಾತ್ಸಲ್ಯದಿಂದ ಪ್ರಾಣಿಗಳನ್ನು ಸಾಕಿರುತ್ತಾರೆ. ಆ ಪ್ರಾಣಿಗೂ ತನ್ನ ಯಜಮಾನನೇ ಸರ್ವಸ್ವ. ಇದೇ ಅಂಶವನ್ನು ಮುಖ್ಯವಾಗಿಟ್ಟುಕೊಂಡು ನಿರ್ಮಾಣವಾಗಿತ್ತಿರುವ ಚಿತ್ರ 'ಡವ್ ಮಾಸ್ಟರ್'. ತಬಲ ನಾಣಿ ಹಾಗೂ ರಾಕಿ(ನಾಯಿ) ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಚಿತ್ರೀಕರಣ, ಇತ್ತೀಚೆಗೆ ಉತ್ತರಹಳ್ಳಿ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದೆ.

ನಾನು 10 ವರ್ಷಗಳಿಂದ ಕನ್ನಡ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಇದು ನನ್ನ ನಿರ್ದೇಶನದ ಚೊಚ್ಚಲ ಚಿತ್ರ. ನಿರ್ಮಾಪಕರ ಬಳಿ ಕಥೆ ಬಗ್ಗೆ ಹೇಳಿದ ತಕ್ಷಣ ಒಪ್ಪಿಕೊಂಡರು. ಮನುಷ್ಯ ಹಾಗೂ ಪ್ರಾಣಿ ನಡುವಿನ ಸಂಬಂಧದ ಮೌಲ್ಯ ತಿಳಿಸುವ ಸಿನಿಮಾ ಇದಾಗಿದೆ.

ಡವ್ ಮಾಸ್ಟರ್ ಚಿತ್ರ ತಂಡ

ನಾನೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದೇನೆ. ತಬಲ ನಾಣಿ, ನವೀನ್ ಪಡೀಲ್, ಸುಂದರ್, ಕುರಿ ಪ್ರತಾಪ್, ಮಿತ್ರ, ಕಾಕ್ರೋಜ್ ಸುಧೀ, ಗಿರೀಶ್ ಜತ್ತಿ, ಗೋವಿಂದೇಗೌಡ, ಸ್ವಪ್ನ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಬಹಳ ದಿನಗಳ ನಂತರ ಮಲೆಯಾಳಂ ನಟಿ ಶಕೀಲಾ ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಕಿ(ನಾಯಿ) ಪ್ರಮುಖ ಪಾತ್ರ ನಿರ್ವಹಿಸುತ್ತಿದೆ ಎಂದು ನಿರ್ದೇಶಕ ಆರ್ಯ ತಮ್ಮ ತಂಡದ ಪರಿಚಯ ಮಾಡಿಕೊಟ್ಟರು.

ನಿರ್ಮಾಪಕ ರೋಷನ್ ಪಾಷಾ ಮಾತನಾಡಿ, ನಾನು ಉದ್ಯಮಿ. ನಿರ್ಮಾಪಕನಾಗಿ ಇದು ನನ್ನ ಮೊದಲ ಚಿತ್ರ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಸಿನಿಮಾ ಮಾಡುತ್ತಿರುವ ಖುಷಿಯಿದೆ ಎಂದರು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಈ ಚಿತ್ರಕ್ಕೆ ಕಥೆಯೇ ಹೀರೋ. ಎರಡನೇ ಹೀರೋ ನಮ್ಮ ರಾಕಿ. ನಾನು‌ ನಾಯಿಯನ್ನು ಪ್ರೀತಿಯಿಂದ ಮಗನಂತೆ ಸಾಕಿರುತ್ತೇನೆ. ಕೊನೆಗೆ ಆ ನಾಯಿಯಿಂದ ನಿಮಗೆ ಕೆಡಕಾಗುತ್ತದೆ ಎಂದು ತಿಳಿದಾಗ, ನಾನು ಏನು ಮಾಡುತ್ತೇನೆ ಎಂಬುದನ್ನು ನೀವು ಚಿತ್ರದಲ್ಲಿ ನೋಡಬೇಕು.

ಎಲ್ಲರೂ ಗಂಡಿಗೆ ಹೆಣ್ಣು ಹುಡುಕಲು ಹೋಗುತ್ತಾರೆ. ನಾವು ಇದರಲ್ಲಿ ನಮ್ಮ ರಾಕಿಗೆ ಕನ್ಯಾನ್ವೇಷಣೆ ಮಾಡುತ್ತೇವೆ. ಉತ್ತಮ ಕಥೆಯ ಈ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ತಬಲನಾಣಿ‌ ಹೇಳಿದರು. ತುಂಬಾ ದಿನಗಳ ನಂತರ ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಹಿಂದೆ ನಟಿಸಿರುವ ಚಿತ್ರಗಳಿಗಿಂತ ಭಿನ್ನ ಪಾತ್ರ ಎನ್ನಬಹುದು ಎನ್ನುತ್ತಾರೆ ನಟಿ ಶಕೀಲಾ.

ನಾನು ನಿರ್ದೇಶಕ ಆರ್ಯ ಬಹು ದಿನಗಳ ಸ್ನೇಹಿತರು. ಅವರು ಬಂದು ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಲು ಹೇಳಿದರು. ನನಗೆ ಡ್ಯಾನ್ಸ್ ತುಂಬಾ ಕಷ್ಟ ಅಂದೆ. ಇಲ್ಲ ನೀವೇ ಮಾಡಬೇಕು ಅಂದರು. ಈ ಚಿತ್ರದ ಹಾಡೊಂದಕ್ಕೆ ನೃತ್ಯ ಮಾಡುತ್ತಿದ್ದೇನೆ ಎಂದು ಕಾಕ್ರೋಜ್ ಸುಧೀ‌ ತಿಳಿಸಿದರು.

ಸುಂದರ್, ನವೀನ್ ಪಡೀಲ್, ಗಿರೀಶ್ ಜತ್ತಿ, ಗೋವಿಂದೇ ಗೌಡ, ಸ್ವಪ್ನ ಮುಂತಾದ ಕಲಾವಿದರು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ಶಕೀಲ್ ಅಹ್ಮದ್ ಹಾಡುಗಳ ಬಗ್ಗೆ, ಕಿರಣ್ ಛಾಯಾಗ್ರಹಣದ ಕುರಿತು ಹಾಗೂ ರಾಕಿ(ಡಾಗ್) ಟ್ರೈನರ್ ಸ್ವಾಮಿ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ:ಶಿವಣ್ಣ ಫ್ಯಾನ್ಸ್​​​ಗೆ ಗುಡ್​ ನ್ಯೂಸ್​​ : ಒಟಿಟಿಯಲ್ಲಿ ಭಜರಂಗಿ 2 ಸಿನಿಮಾ ವೀಕ್ಷಿಸಲು ಡೇಟ್ ಫಿಕ್ಸ್

ABOUT THE AUTHOR

...view details