ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ದರ್ಶನ್ ಅವರ ಕಾರ್ಯಕ್ಕೆ ಉಪ್ಪಿ ಕೈ ಜೋಡಿಸಿದ್ದಾರೆ.
ಆಫ್ರಿಕನ್ ಆನೆ ದತ್ತು ಪಡೆದು ದರ್ಶನ್ ಮನವಿ ಬೆಂಬಲಿಸಿದ ರಿಯಲ್ ಸ್ಟಾರ್ ಉಪ್ಪಿ - ನಟ ಉಪೇಂದ್ರ,
ರಾಜ್ಯದ 9 ಮೃಗಾಲಯಗಳಲ್ಲಿನ ಪ್ರಾಣಿಗಳ ಸಂಕಷ್ಟಕ್ಕೆ ಸ್ಪಂದಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿಗೆ ಅಭಿಮಾನಿಗಳಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಎಲ್ಲ ಝೂಗಳಿಗೆ ಹರಿದು ಬಂದ ಹಣ ಇದೀಗ ಕೋಟಿಗೂ ಹೆಚ್ಚಾಗಿದೆ.
![ಆಫ್ರಿಕನ್ ಆನೆ ದತ್ತು ಪಡೆದು ದರ್ಶನ್ ಮನವಿ ಬೆಂಬಲಿಸಿದ ರಿಯಲ್ ಸ್ಟಾರ್ ಉಪ್ಪಿ African elephant adopted by Actor Upendra, African elephant adopted by Actor Upendra and joined hands with Darshan, African elephant adopted by Actor Upendra news, Actor Upendra, Actor Upendra news, ಆಫ್ರಿಕನ್ ಆನೆ ದತ್ತು ಪಡೆದ ಉಪೇಂದ್ರ, ದರ್ಶನ್ ಜೊತೆ ಕೈ ಜೋಡಿಸಿ ಆಫ್ರಿಕನ್ ಆನೆ ದತ್ತು ಪಡೆದ ಉಪೇಂದ್ರ, ಆಫ್ರಿಕನ್ ಆನೆ ದತ್ತು ಪಡೆದ ಉಪೇಂದ್ರ ಸುದ್ದಿ, ನಟ ಉಪೇಂದ್ರ, ನಟ ಉಪೇಂದ್ರ ಸುದ್ದಿ,](https://etvbharatimages.akamaized.net/etvbharat/prod-images/768-512-12092730-310-12092730-1623390497334.jpg)
ದರ್ಶನ್ ಮಾತಿಗೆ ಕೈ ಜೋಡಿಸಿದ ರಿಯಲ್ ಸ್ಟಾರ್ ಉಪೇಂದ್ರ
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಉಪೇಂದ್ರ, ಪ್ರಾಣಿಗಳೇ ಗುಣದಲ್ಲಿ ಮೇಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ರವರ ಕರೆಯಂತೆ ಮೈಸೂರಿನ ಮೃಗಾಲಯದಿಂದ ಆಫ್ರಿಕನ್ ಆನೆ ದತ್ತು ಪಡೆದು ದರ್ಶನ್ ಕೆಲಸಕ್ಕೆ ಕೈಜೋಡಿಸಿದ್ದೇನೆ ಎಂದಿದ್ದಾರೆ.
ಕಳೆದ 6 ದಿನದಲ್ಲಿ ರಾಜ್ಯದ ಎಲ್ಲಾ ಮೃಗಾಲಯಗಳಿಗೆ 1 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ.
Last Updated : Jun 11, 2021, 12:59 PM IST