ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಪದ್ಮವಿಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನ, ಕೇಂದ್ರ ಸರ್ಕಾರ ಗಣರಾಜ್ಯೋತ್ಸವದ ಒಂದು ದಿನ ಮುಂಚಿತವಾಗಿ ಪ್ರಕಟಿಸಿದೆ.
ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಇದರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಪ್ರಶಸ್ತಿಗೆ ಭಾಜನರಾಗಿದ್ದಾರೆ. 13 ಸಾಧಕರಿಗೆ ಮರಣೋತ್ತರ ಪ್ರಶಸ್ತಿ ಲಭಿಸಿದೆ. ಆದರೆ, ಕೇಂದ್ರ ಸರ್ಕಾರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೆ ಅನ್ಯಾಯವಾಗಿದೆ.
ಹೌದು 2022ರ ಸಾಲಿನಲ್ಲಿ ಯಾರಿಗೆ ಈ ದೇಶದ ಅತ್ಯುನ್ನತ ಪ್ರಶಸ್ತಿ ಸಿಗಬೇಕು ಎಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಆಯಾ ರಾಜ್ಯದ ಜನತೆಗೆ ಆಯ್ಕೆ ಮಾಡಿ ಅಂತಾ ಕಳೆದ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಹೇಳಿದರು.
ಓದಿ:ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ
ಅದರಂತೆ ಭಾರತೀಯ ಚಿತ್ರರಂಗ ಕಂಡ ಹಾಗು ಈ ನಾಡು ಕಂಡ ಅತ್ಯಂತ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾದ ಹಿರಿಯ ನಟ ಅನಂತನಾಗ್ಗೆ ಅವ್ರಿಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು ಅಂತಾ ಕನ್ನಡ ಚಿತ್ರರಂಗದಿಂದ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಮಾಡಲಾಗಿತ್ತು.
ಯಾಕೆಂದರೆ ಕನ್ನಡ ಭಾಷೆಗೆ, ನಾಡಿಗೆ, ಚಿತ್ರರಂಗಕ್ಕೆ ಕೊಡುಗೆ ಅಮೋಘ. ಎಂತಹ ಪಾತ್ರಗಳು ಆಗಲಿ ಲೀಲಾಜಾಲವಾಗಿ ಅಭಿನಯಿಸಿ ಚಿತ್ರರಸಿಕರ ಮನಗೆಲ್ಲುತ್ತಾ ಬಂದಿರುವ ಈ ಅಭಿನಯ ಬ್ರಹ್ಮ ಅನಂತ್ ನಾಗ್ ಅವ್ರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ದೊಡ್ಡ ಮಟ್ಟದಲ್ಲಿ ಅಭಿಯಾನ ಮಾಡಲಾಗಿತ್ತು.