ಕರ್ನಾಟಕ

karnataka

ETV Bharat / sitara

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತ...ಆಸ್ಪತ್ರೆಗೆ ದಾಖಲು - ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ

ಅರ್ಜುನ್ ಜನ್ಯ ಮೈಸೂರಿನ ತಮ್ಮ ಮನೆಯಲ್ಲಿದ್ದಾಗ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದೆ. ಕುಟುಂಬದವರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತುರ್ತು ನಿಗಾ ಘಟಕದಲ್ಲಿ ಜನ್ಯಗೆ ಚಿಕಿತ್ಸೆ ನೀಡುತ್ತಿದ್ದಾರೆ.

Arjun janya
ಅರ್ಜುನ್ ಜನ್ಯಾ

By

Published : Feb 27, 2020, 7:48 AM IST

Updated : Feb 27, 2020, 9:42 AM IST

ಮೈಸೂರು: ಸ್ಯಾಂಡಲ್​​ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತ ಸಂಭವಿಸಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಅರ್ಜುನ್ ಜನ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅರ್ಜುನ್ ಜನ್ಯ ಮೈಸೂರಿನ ತಮ್ಮ ಮನೆಯಲ್ಲಿದ್ದಾಗ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದೆ. ಕುಟುಂಬದವರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತುರ್ತು ನಿಗಾ ಘಟಕದಲ್ಲಿ ಜನ್ಯಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಲವಾರು ಸಿನಿಮಾಗಳಿಗೆ ಉತ್ತಮ ಸಂಗೀತ ನೀಡುವ ಮೂಲಕ ಅರ್ಜುನ್ ಜನ್ಯ ಸ್ಯಾಂಡಲ್​ವುಡ್​​ನಲ್ಲಿ ಖ್ಯಾತ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಖಾಸಗಿ ವಾಹಿನಿಯ ಸಂಗೀತ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಕೂಡಾ ಜನ್ಯ ಭಾಗವಹಿಸುತ್ತಿದ್ದಾರೆ. ಅರ್ಜುನ್ ಜನ್ಯ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

Last Updated : Feb 27, 2020, 9:42 AM IST

ABOUT THE AUTHOR

...view details