ಕರ್ನಾಟಕ

karnataka

ETV Bharat / sitara

ರಜಿನಿಕಾಂತ್ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಬೆಂಕಿ ಹಚ್ಚಿಕೊಳ್ಳಲು ಮುಂದಾದ ಅಭಿಮಾನಿ - rajinikant Fan tried to set fire himself

ಸೂಪರ್‌ಸ್ಟಾರ್ ರಜಿನಿಕಾಂತ್, ರಾಜಕೀಯಕ್ಕೆ ಪ್ರವೇಶಿಸದೇ ಜನರ ಸೇವೆಯನ್ನು ಮುಂದುವರಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆ ಅಭಿಮಾನಿ ಮುರುಗೇಶನ್ ಎಂಬುವವರು, ರಜಿನಿಕಾಂತ್ ಅವರು ರಾಜಕೀಯಕ್ಕೆ ಬರಬೇಕೆಂದು ಒತ್ತಾಯಿಸಿ ಸ್ವತಃ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ.

Superstar Rajinikanth
ಸೂಪರ್‌ಸ್ಟಾರ್ ರಜನಿಕಾಂತ್

By

Published : Jan 1, 2021, 8:58 AM IST

ಚೆನ್ನೈ: ಸೂಪರ್‌ಸ್ಟಾರ್ ರಜಿನಿಕಾಂತ್ ಅವರು ರಾಜಕೀಯಕ್ಕೆ ಪದಾರ್ಪಣೆ ಮಾಡುವುದಿಲ್ಲ ಎಂದು ಡಿಸೆಂಬರ್ 28 ರಂದು ಘೋಷಿಸಿದ್ದು, ಹೆಚ್ಚಿನವರು ನಿರಾಸೆಗೊಂಡಿದ್ದಾರೆ. ಇದೀಗ ಅವರ ಅಭಿಮಾನಿಯೋರ್ವ, ರಜಿನಿಕಾಂತ್ ಅವರು ರಾಜಕೀಯಕ್ಕೆ ಬರಬೇಕೆಂದು ಒತ್ತಾಯಿಸಿ ಸ್ವತಃ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ.

ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ್ದರು. ಹಾಗೆಯೇ ರಾಜಕೀಯಕ್ಕೆ ಪ್ರವೇಶಿಸದೇ ಜನರ ಸೇವೆಯನ್ನು ಮುಂದುವರೆಸುವುದಾಗಿ ಘೋಷಿಸಿದ್ದರು. ಈ ಘೋಷಣೆಯಿಂದ ಅವರ ಅಭಿಮಾನಿಗಳು ಸೇರಿದಂತೆ ಹೆಚ್ಚಿನವರಿಗೆ ಆಘಾತವನ್ನುಂಟು ಮಾಡಿದೆ. ಅನಾರೋಗ್ಯ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದು, ಜನರು ರಜಿನಿಕಾಂತ್​ ಅವರಿಗೆ ಸಹಕಾರ ನೀಡಿದ್ದಾರೆ. ಇನ್ನೂ ಹಲವರು ರಾಜಕೀಯಕ್ಕೆ ಬರುವಂತೆ ಒತ್ತಾಯಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ:ರಾಜಕೀಯದಿಂದ ಹಿಂದೆ ಸರಿದ ರಜನಿಕಾಂತ್​: ಅಘಾತಕ್ಕೊಳಗಾಗಿ ಸಾವಿಗೀಡಾದ ಅಭಿಮಾನಿ

ನಿನ್ನೆ ಮಧ್ಯಾಹ್ನ 3.45 ಕ್ಕೆ ರಜಿನಿಕಾಂತ್ ಅವರ ಅಭಿಮಾನಿ ಮುರುಗೇಶನ್ (55) ಅವರು ರಜಿನಿ ರಾಜಕೀಯಕ್ಕೆ ಬರಬೇಕೆಂದು ಒತ್ತಾಯಿಸಿ ಸ್ವತಃ ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದಾರೆ. ಚೆನ್ನೈನ ಪೋಸ್ ಗಾರ್ಡನ್​ನಲ್ಲಿರುವ ಸೂಪರ್​ಸ್ಟಾರ್​​​ ಮನೆ ಬಳಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನೂ ಓದಿ:ತಲೈವಾಗೆ ‘ದೇವರ ಎಚ್ಚರಿಕೆಯ ಕರೆ’! ಸದ್ಯಕ್ಕೆ ಪಕ್ಷ ಸ್ಥಾಪನೆ ಮಾಡದಿರಲು ರಜನಿಕಾಂತ್ ನಿರ್ಧಾರ

ಆ ಸ್ಥಳದಲ್ಲಿ ಭದ್ರತಾ ಕಾರ್ಯದಲ್ಲಿದ್ದ ಪೊಲೀಸರು ಆ ವ್ಯಕ್ತಿಯನ್ನು ತಡೆದಿದ್ದು, ನಂತರ 108 ಆ್ಯಂಬುಲೆನ್ಸ್​​ ‌ ಮೂಲಕ ರಾಯಪೆಟ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯ ಮುರುಗೇಶನ್ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details