ಕರ್ನಾಟಕ

karnataka

ETV Bharat / sitara

ನೆರೆ ಸಂತ್ರಸ್ತರಿಗೆ 25 ಲಕ್ಷ ನೆರವು ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಇಂದು ‌ವಿಧಾನಸೌಧದಲ್ಲಿ ಕರ್ನಾಟಕ ಚನಲಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನೆರೆ ಸಂತ್ರಸ್ತರಿಗೆ 25 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದಾರೆ.

By

Published : Aug 19, 2019, 10:26 PM IST

ಚಲನಚಿತ್ರ ವಾಣಿಜ್ಯ ಮಂಡಳಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನೆರೆ ಸಂತ್ರಸ್ತರಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಇಂದು ‌ವಿಧಾನಸೌಧದಲ್ಲಿ ಕರ್ನಾಟಕ ಚನಲಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚೆಕ್ ಹಸ್ತಾಂತರಿಸಿದ್ದಾರೆ.

ಈ ವೇಳೆ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು, ಚಿನ್ನೇಗೌಡ ಹಾಗೂ ಫಿಲ್ಮ್ ಚೇಂಬರ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

25 ಲಕ್ಷ ನೆರವು ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕಳೆದ ಶನಿವಾರ ಈ ವಿಚಾರವಾಗಿ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರ ಜೊತೆ ಚರ್ಚೆ‌ ಮಾಡಿ, ನೆರೆ ಸಂತ್ರಸ್ತರಿಗೆ 25 ಲಕ್ಷ ರೂ. ಪರಿಹಾರ ನೀಡಿರುವುದಾಗಿ ಚೇಂಬರ್ ಅಧ್ಯಕ್ಷ ಜೈರಾಜ್ ತಿಳಿಸಿದರು.

ಇಂದು ಅಧ್ಯಕ್ಷ ಜೈರಾಜ್ ಹಾಗೂ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಪರಿಹಾರ ನಿಧಿಗೆ 25 ಲಕ್ಷದ ಚೆಕ್ ನೀಡಿದ್ದಾರೆ.

ABOUT THE AUTHOR

...view details