ಕರ್ನಾಟಕ

karnataka

By

Published : Oct 12, 2020, 12:18 PM IST

ETV Bharat / sitara

ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಹೆಚ್​​ಡಿಕೆ ಸಂತಾಪ

ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಮಾಜಿ ಸಿಎಂ ಹೆಚ್​​ಡಿಕೆ ಸಂತಾಪ ಸೂಚಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ ಎಂದು ಹೆಚ್​ಡಿಕೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

HDK Condolences
ರಾಜನ್ ನಿಧನಕ್ಕೆ ಹೆಚ್​ಡಿಕೆ ಸಂತಾಪ

ಬೆಂಗಳೂರು:ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್​​.ಡಿ. ಕುಮಾರಸ್ವಾಮಿ ಕೂಡಾ ರಾಜನ್ ನಿಧನಕ್ಕೆ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

"ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಕನ್ನಡದಲ್ಲಿ 175 ಕ್ಕೂ‌ ಹೆಚ್ಚು ಚಿತ್ರಗಳಿಗೆ ಸಂಗೀತ ‌ನಿರ್ದೇಶನ ಮಾಡಿದ್ದ ಖ್ಯಾತಿ ರಾಜನ್-ನಾಗೇಂದ್ರ ‌ಜೋಡಿಯದ್ದಾಗಿತ್ತು. ಗಂಧದಗುಡಿ, ಬಯಲುದಾರಿ, ಎರಡು ಕನಸು, ಹೊಂಬಿಸಿಲು, ಆಟೋರಾಜ ಸೇರಿ ಹಲವಾರು ಚಿತ್ರಗಳ ಸಂಗೀತ ನಿರ್ದೇಶನ ಮಾಡಿದ್ದ ಅವರು ಕನ್ನಡ ಚಿತ್ರರಂಗದ ಸಂಗೀತದ ಘನತೆಯನ್ನು ಹೆಚ್ಚಿಸಿದ್ದವರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ" ಎಂದು ಹೆಚ್​​ಡಿಕೆ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details