ಹೈದರಾಬಾದ್ನ ಪಶುವೈದ್ಯೆ ದಿಶಾ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರೂ ಇಂತಹ ದುರ್ಘಟನೆಗಳು ಮರುಕಳಿಸುತ್ತಲೇ ಇವೆ.
ದೇಶದಲ್ಲಿ ನಡೆಯುವ ಕೆಲ ನೈಜ ಘಟನೆಗಳನ್ನು ಆಧರಿಸಿ ಎಷ್ಟೋ ಸಿನಿಮಾಗಳು ತಯಾರಾಗಿವೆ. ಇದೀಗ ದಿಶಾ ಪ್ರಕರಣದ ಸ್ಫೂರ್ತಿಯಾಗಿರಿಸಿಕೊಂಡು ಕನ್ನಡದಲ್ಲಿ 'ಹುಡುಕಾಟ' ಎಂಬ ಸಿನಿಮಾ ತಯಾರಾಗುತ್ತಿದೆ. ಚಿತ್ರಕ್ಕೆ 'ಪ್ರತಿ ನಿಮಿಷ ಹೋರಾಟ' ಎಂಬ ಟ್ಯಾಗ್ಲೈನ್ ಇದೆ. ಇಂದು ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋನಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಖ್ಯಾತ ಸಾಹಿತಿ ಶಿವಶಂಕರ್ ಆಗಮಿಸಿ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು, ಪಕ್ಕದ ರಾಜ್ಯದಿಂದ ಬೆಂಗಳೂರಿಗೆ ಬಂದು ಸಿನಿಮಾ ಮಾಡುತ್ತಿರುವ ರವಿ ಮುಲಕಪಲ್ಲಿ ಅವರಿಗೆ ಶುಭ ಕೋರಿದರು.